ಬೀದರ ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ; ಸಾಹಿತಿ ಪಂಡಿತ ಬಸವರಾಜ ಸರ್ವಾಧ್ಯಕ್ಷರಾಗಿ ಆಯ್ಕೆ

Date:

ಬೀದರ್ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಬೀದರ ತಾಲ್ಲೂಕಿನ ಆಣದೂರ ಗ್ರಾಮದಲ್ಲಿ ಬೀದರ ತಾಲ್ಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 8ರಂದು ಆಯೋಜಿಸಲು ತೀರ್ಮಾನಿಸಲಾಗಿದೆ.

- Advertisement -

ಸಮ್ಮೆಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ ಬೆಲ್ದಾಳೆ ಅವರನ್ನು ಆಯ್ಕೆ ಮಾಡಿ ಅವರ ನಿವಾಸದಲ್ಲಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ವೇಳೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಇಂದಿನ ದಿನಮಾನಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಕುಸಿಯುತ್ತಿರುವ ಸಂದರ್ಭದಲ್ಲಿ ಸಾಹಿತ್ಯ ಸಮ್ಮೇಳನವು ಜನಸಾಮಾನ್ಯರಲ್ಲಿ ಹೊಸ ಹುಮ್ಮಸ್ಸು ಬರಲಿದೆ. ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆ ಬೆಳೆಸಿ, ಉಳಿಸಲು ಇದು ಪೂರಕ ವಾತಾವರಣ ಕಲ್ಪಿಸಲಿದೆ. ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆʼ ಎಂದು ಭರವಸೆ ನೀಡಿದರು

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ಮಾತನಾಡಿ, ʼಕನ್ನಡ ಸಾಹಿತ್ಯ ಪರಿಷತ್ತು ಕೇವಲ ನಗರಕ್ಕೆ ಸೀಮಿತಗೊಳಿಸದೆ ಗ್ರಾಮೀಣ ಜನರಿಗೆ ಮುಟ್ಟಿಸಿ ಅವರಲ್ಲಿ ಕನ್ನಡ ಕಂಪು ಪಸರಿಸಲು ಈ ಹಿಂದೆ ಮನ್ನಳ್ಳಿ, ಅಲಿಯಂಬರ ಗ್ರಾಮಗಳಲ್ಲಿ ಸಮ್ಮೇಳನ ಏರ್ಪಡಿಸಲಾಗಿತ್ತು. ಇದೀಗ ದಕ್ಷಿಣ ಮತಕ್ಷೇತ್ರದ ಕಸಾಪ ಆಜೀವ ಸದಸ್ಯರ ಬೇಡಿಕೆ ಸ್ಪಂದಿಸಲು ಪರಿಷತ್ತು ಕಟಿಬದ್ದವಾಗಿದೆ. ಹಿರಿಯ ಸಾಹಿತಿ ಪಂಡಿತ ಬಸವರಾಜ ಅವರನ್ನು ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆʼ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!

ಸಮಾರಂಭದಲ್ಲಿ ಜಿಲ್ಲಾ ಕಸಾಪದ ಶಿವಶಂಕರ ಟೋಕರೆ., ಟಿ.ಎಮ್ ಮಚ್ಚೆ, ಸಿದ್ಧಾರೂಢ ಭಾಲ್ಕೆ, ವೀರಶೆಟ್ಟಿ ಚೆನ್ನಶೆಟ್ಟಿ, ಶ್ರೀನಿವಾಸರೆಡ್ಡಿ, ಪ್ರವೀಣ ಪಟೋದಿ, ಶಿವಕುಮಾರ ಅಷ್ಟೂರ ಇದ್ದರು. ದಕ್ಷಿಣ ಮತಕ್ಷೇತ್ರದ ಕಸಾಪ ಯುವ ಘಟಕ ಅಧ್ಯಕ್ಷ ಬಸವರಾಜ ಬಶೆಟ್ಟಿ ಸ್ವಾಗತಿಸಿದರು. ಕಸಾಪ ವಲಯ ಅಧ್ಯಕ್ಷ ಚೇತನ ಸೊರಳ್ಳಿ ನಿರೂಪಿಸಿದರು. ಸ್ವಾಗತ ಸಮಿತಿ ಕೋಶಾಧ್ಯಕ್ಷ ಸಂತೋಷ ರೆಡ್ಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹೈಕೋರ್ಟ್ ವೃತ್ತದ ಬಳಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ

ಕಲಬುರಗಿ ನಗರದ ಹೈಕೋರ್ಟ್ ವೃತ್ತದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಉಡುಪಿ | ದೇವಸ್ಥಾನಕ್ಕೆ ಹೋದ ದಲಿತರ ಮೇಲೆ ಹಲ್ಲೆ: ‘ಹಿಂದೂ ಹುಲಿಗಳು’ ಈಗ ಎಲ್ಲಿದ್ದಾರೆ? : ಸುಂದರ ಮಾಸ್ತರ್

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಗಿ ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ದೇವರ ಪೂಜೆಗೆ...

ಬೀದರ್‌ | ಬಿರುಸಿನ ಮಳೆ; ಬಾಡುವ ಬೆಳೆಗಳಿಗೆ ಜೀವಕಳೆ

ಮಳೆಗಾಲದಲ್ಲಿಯೂ ಬೇಸಿಗೆಯ ಧಗೆಗೆ ತತ್ತರಿಸಿದ್ದ ಜನರಿಗೆ ಗುರುವಾರ ಸಂಜೆ ಜಿಲ್ಲೆಯ ವಿವಿಧೆಡೆ...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...