ಬೀದರ್‌ | ಕಲಾ ಗ್ರಾಮ ನಿರ್ಮಾಣಕ್ಕೆ ಶೀಘ್ರವೇ ಸ್ಥಳ ಅಂತಿಮ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

Advertisements

ಬೀದರ ಜಿಲ್ಲೆಯಲ್ಲಿ ಜಿಲ್ಲಾ ಕಲಾ ಗ್ರಾಮವನ್ನು ಸ್ಥಾಪಿಸಲು ಬೀದರ ವಿಶ್ವವಿದ್ಯಾಲಯ ಅಥವಾ ಹಳ್ಳದಕೇರಿ ಹತ್ತಿರ ಸ್ಥಳವನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕರಿ ಶಿಲ್ಪಾ ಶರ್ಮಾ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಲಾ ಗ್ರಾಮ ಸ್ಥಾಪಿಸಲು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ʼಜಿಲ್ಲೆಯಲ್ಲಿ ಸ್ಥಾಪಿಸಲು ಇಚ್ಛಿಸಿರುವ ಕಲಾ ಗ್ರಾಮದಲ್ಲಿ ಸಾಂಸ್ಕೃತಿಕ ಪ್ರವಾಸಿ ತಾಣ, ಜಾನಪದ ಕರಕುಶಲ, ಮಾರಾಟ ಮಳಿಗೆ, ಬಯಲು ರಂಗಮಂದಿರ, ಆರ್ಟ್ ಗ್ಯಾಲರಿ, ಅಡಿಟೋರಿಯಂ, ವಚನಕಾರರ ಮೂರ್ತಿಗಳು, ವಚನ ಸಿಂಚನ, ವಚನ ಸಾಹಿತ್ಯ ಕುರಿತು ನಾಮಫಲಕ, ಸಾರಾಂಶ ಕೋಶ, ಶಿಲ್ಪಾವನ, ಡಿಜಿಟಲ್ ಗ್ರಂಥಾಲಯ, ಬೀದರ ಜಿಲ್ಲೆಯ ವಿಶಿಷ್ಟ ಸಂಗೀತ ವಾದ್ಯ ಪರಿಕರಗಳು, ಮೂರ್ತಿ ಪ್ರದರ್ಶನಗಳು, ಜಾನಪದ ಶೈಲಿಯ ವಸ್ತು ಪ್ರದರ್ಶನ, ಸಂಗೀತ ಕಾರಂಜಿ, ಪ್ರಾಚೀನ ಕಾಲದ ನಾಣ್ಯಗಳು, ಕೃಷಿ ಉಪಕರಣಗಳು, ನಾಟಿವೈದ್ಯ ಮುಂತಾದ ವೈಶಿಷ್ಟತೆಗಳನ್ನು ಒಳಗೊಂಡಿರುತ್ತವೆʼ ಎಂದು ಮಾಹಿತಿ ನೀಡಿದರು.

Advertisements

ಕಲಾ ಗ್ರಾಮ ಸ್ಥಾಪನೆಯ ಮುಖ್ಯ ಉದ್ದೇಶ ಜಿಲ್ಲೆಯಲ್ಲಿರುವ ಕಲೆ, ಸಾಹಿತ್ಯ, ನಾಟಕ, ರಂಗಭೂಮಿ ಮತ್ತು ಜಿಲ್ಲೆಯ ವೈಶಿಷ್ಟತೆಯನ್ನು ತಿಳಿಸುವುದಾಗಿದೆ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಇದು ಅನುಕೂಲವಾಗಲಿದೆʼ ಎಂದರು.

WhatsApp Image 2025 06 20 at 3.29.46 PM 1
ಸಭೆಯಲ್ಲಿ ಸಾಹಿತಿ, ಕಲಾವಿದರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಭಾಗವಹಿಸಿದರು.

ಜಿಲ್ಲಾ ಕಲಾ ಗ್ರಾಮಗಳ ಸಮಿತಿಗೆ ಮೂರು ಜನ ಸಂಪನ್ಮೂಲ ವ್ಯಕ್ತಿಗಳ ನೇಮಕ ಮಾಡಿಕೊಳ್ಳಲಾಗುವುದು. ಆದ್ದರಿಂದ ಆಸಕ್ತರು ಸ್ವವಿವರವನ್ನು (Resume) 2025 ಜೂನ್‌ 23ರ ಸಂಜೆ 5:30 ಗಂಟೆ ಒಳಗಾಗಿ ಬೀದರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಕರ್ನಾಟಕ ಜಾನಪದ ಅಕಾಡೆಮಿಯ ಸಹ ಸದಸ್ಯ ವಿಜಯಕುಮಾರ ಸೋನಾರೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜುಕುಮಾರ ಅತಿವಾಳೆ, ಕರ್ನಾಟಕ ವನ್ಯ ಜೀವಿ ಮಂಡಳಿ ಸ್ಥಾಯಿ ಸಮಿತಿ ಸದಸ್ಯ ವಿನಯ ಮಾಳಗೆ ಹಾಗೂ ಪ್ರಮುಖರಾದ ಜಗನ್ನಾಥ ಹೆಬ್ಬಾಳೆ, ಮಾರುತಿ ಬೌದ್ದೆ, ಪಾರ್ವತಿ ಸೋನಾರೆ, ಮಹೇಶ ಪಾಟೀಲ, ಭಾರತಿ ವಸ್ತ್ರದ, ಮಹೇಶ ಗೋರನಾಳಕರ, ಅಂಬ್ರೀಶ ಮಲ್ಲೇಶಿ, ರೋಹನ್‌ಕುಮಾರ್‌ ಸೇರಿದಂತೆ ಕಲಾವಿದರು, ಸಾಹಿತಿಗಳು, ಸಂಘ-ಸಂಸ್ಥೆಯ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌| ʼಶಕ್ತಿ ಯೋಜನೆʼಗೆ 2 ವರ್ಷ: 8.29 ಕೋಟಿ ಮಹಿಳೆಯರು ಪ್ರಯಾಣ; ₹237.80 ಕೋಟಿ ಆದಾಯ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X