ಬೀದರ್‌ ವಿಶ್ವವಿದ್ಯಾಲಯ : ಸ್ನಾತಕೋತ್ತರ ಪದವಿ ಫಲಿತಾಂಶ ಘೋಷಣೆ

Date:

Advertisements

ಬೀದರ ವಿಶ್ವವಿದ್ಯಾಲಯವು 19 ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ ಫಲಿತಾಂಶವನ್ನು ಅ.4ರಂದು ಘೋಷಿಸಿದೆ.

ಬೀದರ್‌ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಶುಕ್ರವಾರ ಸಂಜೆ 4 ಗಂಟೆಗೆ ಫಲಿತಾಂಶ ಘೋಷಿಸಿ ಮಾತನಾಡಿ, ʼಸ್ನಾತಕೋತ್ತರ ಪ್ರಥಮ ಸೆಮಿಸ್ಟರ್‌ನ ಚೊಚ್ಚಲ ಫಲಿತಾಂಶ ಘೋಷಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗಿದೆ. ಇದಕ್ಕಾಗಿ ಶ್ರಮಿಸಿದ ವಿಶ್ವವಿದ್ಯಾಲಯದ ಸಮಸ್ತ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆʼ ಎಂದರು.

ʼಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲು ಎಲ್ಲರೂ ಅವಿರತವಾಗಿ ಶ್ರಮಿಸಿದ್ದಾರೆ. ಈ ಭಾಗದ ನೂತನ ವಿಶ್ವವಿದ್ಯಾಲಯದ ಶ್ರೇಯಸ್ಸಿನಲ್ಲಿ ಹೀಗೆಯೇ ಎಲ್ಲರ ಸಹಕಾರವನ್ನು ವಿಶ್ವವಿದ್ಯಾಲಯ ಬಯಸುತ್ತದೆʼ ಎಂದರು.

Advertisements

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ್ ಮಾತನಾಡಿ, ʼ19 ಸ್ನಾತಕೋತ್ತರ ಕೋರ್ಸ್‌ಗಳ ಫಲಿತಾಂಶವನ್ನು ಏಕಕಾಲಕ್ಕೆ ಪ್ರಕಟಿಸಿ ವಿಶ್ವವಿದ್ಯಾಲಯ ತನ್ನ ಕ್ರಿಯಾಶೀಲತೆ ತೋರಿದೆ. ಈ ಫಲಿತಾಂಶವು ವಿದ್ಯಾರ್ಥಿಗಳಿಗೆ ಹಾಗೂ ಈ ಭಾಗದ ಸರ್ವರಿಗೂ ಸಂತಸ ತಂದಿದೆʼ ಎಂದು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಬೀದರ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಡಾ.ರವೀಂದ್ರನಾಥ.ವಿ.ಗಬಾಡಿ, ಅಧ್ಯಾಪಕರಾದ ಡಾ.ಚನ್ನಕೇಶವ ಮೂರ್ತಿ, ಡಾ.ನಾಗೇಶ ಸಾವಳೆ, ಶ್ರೀಪವನ್ ಕಾಂಬಳೆ, ಡಾ.ರಾಮಚಂದ್ರ ಗಣಾಪೂರ, ಶಿವರಾಜ ಪಾಟೀಲ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X