ಹಲವು ತಿಂಗಳುಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಸ್ಥಳೀಯರು ಹನಿ ನೀರಿಗಾಗಿ ಪರದಾಡುತ್ತಿರುವ ಸ್ಥಿತಿ ಬೀದರ್ ಜಿಲ್ಲೆ ಹುಲಸೂರ ತಾಲೂಕಿನ ತೊಗಲೂರ ಗ್ರಾಮದಲ್ಲಿ ನಿರ್ಮಾಣವಾಗಿದೆ.
“ಗ್ರಾಮದ ಮುಖ್ಯರಸ್ತೆಯ ಮೇಲೆ ನೀರಿನ ವ್ಯವಸ್ಥೆಯಿದ್ದರೂ ಕೂಡ ಪ್ರಯೋಜನವಿಲ್ಲ. ರಸ್ತೆ ಬದಿಯಲ್ಲಿ ಹೊಸದಾಗಿ ನಿರ್ಮಿಸಿದ ಕಾರಣ ಎದೆಯೆತ್ತರದಿಂದ ನೀರು ತರಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮಹಿಳೆಯರು ತೀರಾ ಸಂಕಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಮಹಿಳೆಯರು ಅವಲತ್ತುಕೊಂಡಿದ್ದಾರೆ.
ಹೊಸದಾಗಿ ಆಳೆತ್ತರದ ಚರಂಡಿ ನಿರ್ಮಿಸಿರುವಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಚರಂಡಿ ದಾಟಿ ನೀರು ತರುವ ಸಂದರ್ಭದಲ್ಲಿ ಬಹುತೇಕ ಮಹಿಳೆಯರು ಬಿದ್ದು ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ಜರುಗಿವೆ. ಆದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸದಸ್ಯರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ವಿಪರ್ಯಾಸವೇ ಸರಿ.
ಈ ಸುದ್ದಿ ಓದಿದ್ದೀರಾ? ಬೀದರ್ | ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ; ಶಾಸಕ ಶೈಲೇಂದ್ರ ಬೆಲ್ದಾಳೆ ಎಚ್ಚರಿಕೆ
ಮುಖ್ಯ ರಸ್ತೆಯಿಂದ 20-30 ಅಡಿಯಲ್ಲಿ ನೀರಿನ ಹೊಸ ಟ್ಯಾಂಕ್ ನಿರ್ಮಿಸಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರಿನ ಸಮಸ್ಯೆ ಬಗೆಹರಿಸಲು ಕೂಡಲೇ ಮುಂದಾಗಬೇಕು” ಎಂದು ಸ್ಥಳೀಯ ಮಹಿಳೆಯರು ಒತ್ತಾಯಿಸಿದ್ದಾರೆ.
ಈ ವೇಳೆ ಗ್ರಾಮದ ಸರಸ್ವತಿ, ರಂಗಮ್ಮಾ, ಚಂದ್ರಕಲಾ, ಲಾಲಾಬಾಯಿ, ನಾಸಿಮ್ಮಾ ಇದ್ದರು.