ಬೀದರ್ | ವಿಸ್ಡಮ್ ಕಾಲೇಜು ₹1 ಕೋಟಿ ವಿದ್ಯಾರ್ಥಿ ವೇತನ ಘೋಷಣೆ

Date:

Advertisements

ಬೀದರ್ ನಗರದ ವಿಸ್ಡಮ್ ಪದವಿಪೂರ್ವ ವಿಜ್ಞಾನ ಕಾಲೇಜು ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹1 ಕೋಟಿ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಕಾಲೇಜು ಅಧ್ಯಕ್ಷ ಮಹಮ್ಮದ್ ಆಸಿಫೊದ್ದೀನ್ ಪ್ರಕಟಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿಸ್ಡಮ್ ಹಾಗೂ ಇತರ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ನಗರದ ಉರ್ದು ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕಾಲೇಜಿನಲ್ಲಿ ಪ್ರವೇಶ ಪಡೆಯುವ 400 ವಿದ್ಯಾರ್ಥಿಗಳಿಗೆ ಶುಲ್ಕ ರಿಯಾಯಿತಿ ರೂಪದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು’ ಎಂದು ತಿಳಿಸಿದರು.

ಶೇ 95 ಕ್ಕೂ ಅಧಿಕ ಅಂಕ ಗಳಿಸಿದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 75, ಹಾಸ್ಟೆಲ್ ಶುಲ್ಕದಲ್ಲಿ ಶೇ 50, ಶೇ 85ಕ್ಕೂ ಹೆಚ್ಚು ಅಂಕ ಪಡೆದ 100 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 35, ಹಾಸ್ಟೆಲ್ ಶುಲ್ಕದಲ್ಲಿ ಶೇ 25 ಹಾಗೂ ಶೇ 75ಕ್ಕೂ ಅಧಿಕ ಅಂಕ ಗಳಿಸಿದ 200 ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಶೇ 25 ಹಾಗೂ ಹಾಸ್ಟೆಲ್ ಶುಲ್ಕದಲ್ಲಿ ಶೇ 10 ರಷ್ಟು ರಿಯಾಯಿತಿ ಕಲ್ಪಿಸಲಾಗುವುದು ಎಂದು ಹೇಳಿದರು.

Advertisements

ವಿಸ್ಡಮ್ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತ ಬಂದಿದೆ. ಜಿಲ್ಲೆಯ ಫಲಿತಾಂಶ ಸುಧಾರಣೆಗೂ ಕೊಡುಗೆ ನೀಡುತ್ತಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ 2 ಬರೆಯುವ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಉಚಿತ ತರಬೇತಿ ಆರಂಭಿಸಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿಸ್ಡಮ್ ಆಂಗ್ಲಮಾಧ್ಯಮ ಪ್ರೌಢಶಾಲೆ, ಅಸ್ರಾ ಪ್ರೌಢಶಾಲೆ, ಎಂಬೆಸಿ ಪ್ರೌಢಶಾಲೆ, ರೋಜಾ ಮಿಷನ್ ಪ್ರೌಢಶಾಲೆ, ಒಯಿಸ್ಟಿರ್ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಸದಸ್ಯೆ ಚೇತನಾ ಮೋಹನ್, ವಿಸ್ಡಮ್ ಕಾಲೇಜು ಕಾರ್ಯದರ್ಶಿ ಮಹಮ್ಮದ್ ಸಲಾವುದ್ದೀನ್, ಪ್ರಾಚಾರ್ಯ ಶೇಕ್ ಮದಾರ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X