ಬೀದರ್‌ | ಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು; ಸ್ಥಳದಲ್ಲೇ ಎರಡು ವರ್ಷದ ಮಗು ಸಾವು

Date:

Advertisements

ಆಟವಾಡುತ್ತಿದ್ದಾಗ ಇನ್ನೋವಾ ಕಾರು ಹತ್ತಿಸಿದ ಪರಿಣಾಮ ಸ್ಥಳದಲ್ಲೇ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಹಾರೋಗೆರಿ ಬಡವಾಣೆಯ ಗುರುಪಾದಪ್ಪಾ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ನಡೆದಿದೆ.

ನಗರದ ಹಾರೂಗೇರಿ‌ಯ ನಿವಾಸಿಗಳಾದ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿ ಪುತ್ರ ಬಸವ ಚೇತನ (2) ಮೃತ ಕಂದಮ್ಮ, ಈ ಹೃದಯ ವಿದ್ರಾವಕ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

“ಮಗುವಿನ ದಂಪತಿಗಳು ಸಂಬಂಧಿಕರ ಮನೆಗೆ ಬಂದಿದ್ದರು, ಸಂಜೆ 4.40ರ ಸುಮಾರಿಗೆ ಮಗು ಹೊರಗಡೆ ರಸ್ತೆ ಮೇಲೆ ಆಟವಾಡುತ್ತಿದ್ದಾಗ ಮಗುವಿನ ಮೇಲೆ ಇನ್ನೋವಾ ಕಾರು ಹರಿದ ದುರ್ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ಎರಡು ವರ್ಷದ ಮಗು ಪ್ರಾಣ ಕಳೆದುಕೊಂಡಿದೆ. ಇನ್ನೋವಾ ಕಾರು ಚಾಲಕ ವೃತ್ತಿಯಲ್ಲಿ ದಂತ ವೈದ್ಯ ಎನ್ನಲಾಗುತ್ತಿದೆ” ಎಂದು ಸಂಬಂಧಿಕರು ಈದಿನ.ಕಾಮ್‌ ದೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

Advertisements

ಈ ಸಂಬಂಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X