ಔರಾದ್‌ | ಇಂದು ಸಂಜೆ ʼಚಟ್ನಾಳ ಸಂಭ್ರಮʼ

Date:

ಔರಾದ(ಬಿ) ತಾಲೂಕಿನ ಚಟ್ನಾಳ ಗ್ರಾಮದಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಗುರುಬಸವ ಪಟ್ಟದ್ದೇವರ ದಿವ್ಯಸಮ್ಮುಖದಲ್ಲಿ ಇಂದು (ಬುಧವಾರ) ಸಂಜೆ 6 ಗಂಟೆಗೆ ‘ಚಟ್ನಾಳ ಸಂಭ್ರಮ’ ಸಮಾರಂಭ ಜರುಗಲಿದೆ.

- Advertisement -

ಗ್ರಾಮದ ಹಿರಿಯ ಮುಖಂಡ ಚಂದ್ರಪ್ಪ ಕುಂಬಾರ ಅಧ್ಯಕ್ಷತೆ ವಹಿಸಿಲಿದ್ದಾರೆ . ಔರಾದ್ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರಿಂದ ಬಸವಗುರು ಪೂಜೆ ನಡೆಯುವುದು. ಮುಖ್ಯ ಅತಿಥಿಗಳಾಗಿ ಶೆಂಬೆಳ್ಳಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಆಗಮಿಸಲಿದ್ದಾರೆ. ಭಾರತೀಯ ಬಸವ ಬಳಗದ ಜಿಲ್ಲಾಧ್ಯಕ್ಷ ಡಾ.ಸಂಜೀವಕುಮಾರ ಜುಮ್ಮಾ ಅವರಿಂದ ಪ್ರಾರ್ಥನೆ ನಡೆಯುವುದು. ಗುಲಬರ್ಗಾ ವಿವಿ ಸಿಂಡಿಕೇಟ್‌ ಸದಸ್ಯ ಸಿದ್ದಪ್ಪ ಮೂಲಗೆ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಅನುಭವ ಮಂಟಪ ಗುರುಕುಲ ಪಬ್ಲಿಕ್ ಶಾಲೆ ಸಂತಪೂರ, ಜ್ಞಾನ ಭಾರತಿ ಗುರುಕುಲ ಸಂತಪೂರ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಚಟ್ನಾಳ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಭಾಲ್ಕಿ ಹಿರೇಮಠದ ಹಾನಗಲ್ಲ ಕುಮಾರೇಶ್ವರ ಪ್ರಸಾದ ನಿಲಯದ ಮಕ್ಕಳಿಂದ ‘ಬಸವ ಆಸ್ತಿ’ ಕಿರುನಾಟಕ ಪ್ರದರ್ಶನಗೊಳ್ಳಲಿದೆ.

ಇದನ್ನೂ ಓದಿ : ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

Advertisements

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಗೌರವ ಸನ್ಮಾನ ಜರುಗುವುದು ಎಂದು ಸಮಾರಂಭದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...