ಔರಾದ್‌ | ಸಬ್ಸಿಡಿ ಬೀಜ ನೆರೆ ರಾಜ್ಯದ ರೈತರಿಗೆ ಮಾರಾಟ : ಆರೋಪ

Date:

ಮುಂಗಾರು ಹಂಗಾಮಿನ ಸೋಯಾಬಿನ್ ಬಿತ್ತನೆ ಬೀಜಗಳು ವಿತರಣೆ ಮಾಡುವಲ್ಲಿ ಭಾರಿ ಮಟ್ಟದ ಭ್ರಷ್ಟಾಚಾರ ನಡೆದಿದ್ದು ರಾಜ್ಯದ ರೈತರಿಗೆ ಸಿಗಬೇಕಾದ ಸಬ್ಸಿಡಿ ದರದ ಬಿತ್ತನೆ ಬೀಜಗಳು ನೆರೆಯ ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯದ ರೈತರ ಪಾಲಾಗಿವೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆ ಗಂಭೀರವಾಗಿ ಆರೋಪಿಸಿದೆ.

- Advertisement -

ಈ ಕುರಿತು ರಾಷ್ಟ್ರೀಯ ಅಹಿಂದ ಸಂಘಟನೆಯ ಯುವ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮಣ ದೇವಕತ್ತೆ ನೇತ್ರತ್ವದಲ್ಲಿ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ರಾಜ್ಯದ ರೈತರಿಗೆ ಸಿಗಬೇಕಾದ ಬಿತ್ತನೆ ಬೀಜಗಳನ್ನು, ಅಧಿಕಾರಿಗಳು ತೆಲಂಗಾಣ ಮತ್ತು ಮಹಾರಾಷ್ಟ್ರದ ಗಡಿ ರಾಜ್ಯಗಳ ರೈತರಿಗೆ ವಿತರಿಸುತ್ತಿರುವುದು ಗಮನಕ್ಕೆ ಬಂದಿದೆ. ಕೃಷಿ ಅಧಿಕಾರಿ ಔರಾದ್ ರೈತ ಸಂಪರ್ಕ ಕೇಂದ್ರದಲ್ಲಿ ಮನ ಬಂದಂತೆ ವ್ಯಕ್ತಿಗಳನ್ನು ಕರೆದುಕೊಂಡು ಕೇಂದ್ರದಲ್ಲಿ ಬೀಜ ವಿತರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ” ಎಂದು ದೂರಿದ್ದಾರೆ.

“ಔರಾದ್‌ ಕ್ಷೇತ್ರದ ಬಾವಲಗಾಂವ, ಸಾವರಗಾಂವ, ಹೊಕ್ರಣಾ, ಭಂಡಾರಕುಮಟಾ, ಖೇರ್ಡಾ, ಹುಲ್ಯಾಳ, ಎಕಂಬಾ, ಜಮಾಲಪೂರ, ಖಂಡೇಕೇರಿ, ಹಸ್ಸಿಕೇರಿ, ಗೌಂಡಗಾಂವ, ಡೋಣಗಾಂವ, ಮುಂಗನಾಳ, ಬೋರಾಳ, ಕಪ್ಪೆಕೇರಿ, ಎಕಲಾರ, ಅಲ್ಲಾಪೂರ ಈ ಎಲ್ಲಾ ಗ್ರಾಮದ ರೈತರಿಗೆ ಬಿತ್ತನೆ ಬೀಜಗಾಗಿ‌ ಔರಾದ್ ರೈತ ಸಂಪರ್ಕ ಕೇಂದ್ರ ಕೇಂದ್ರದ ಮುಂದೆ ಸಾಲುಗಟ್ಟಿ ನಿಲ್ಲಬೇಕಾದ ಸ್ಥಿತಿ ಬಂದಿದೆ. ಅಧಿಕಾರಿಗಳು ಸ್ಥಳೀಯ ರೈತರಿಗೆ ರಿಯಾಯತಿ ದರದಲ್ಲಿ ಬೀಜ ನೀಡದೆ ಸತಾಯಿಸುತ್ತಿದ್ದು, ಲಂಚ ಪಡೆದು ಅನ್ಯ ರಾಜ್ಯದ ರೈತರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸೋರುವ ಕೊಠಡಿ, ಶಿಕ್ಷಕರ ಕೊರತೆ : ಆತಂಕದಲ್ಲಿ ಮಕ್ಕಳ ಕಲಿಕೆ!

ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಸತ್ಯಾಗ್ರಹ ನಡೆಸುವುದಾಗಿ ಸಂಘಟನೆಯ ರಾಜ್ಯ ಯುವ ಘಟಕದ ಅಧ್ಯಕ್ಷ ಲಕ್ಷ್ಮಣ ದೇವಕತ್ತೆ, ರಮೇಶ ಚವ್ಹಾಣ್, ಘಾಳಪ್ಪ ಬೆಂಬಳಖೇಡೆ, ರಾಜು ಮುದಾಳೆ, ಸಚಿನ ಮತ್ರೆ, ಅಮರ ದ್ಯಾಡೆ, ಮಲ್ಲಿಕಾರ್ಜುನ ಹೊಳಸಮುದ್ರ, ರವೀಂದ್ರ ಬಳತೆ, ಭಂಗೆ ಹಾಗೂ ರಮೇಶ ಕಾಂಬಳೆ ಸೇರಿದಂತೆ ಮತ್ತಿತರರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...