ಬೀದರ್ | ‘ಈದಿನ’ ವರದಿಗೆ ಸ್ಪಂದನೆ : ಸೋರಳ್ಳಿ ಗ್ರಾಮಕ್ಕೆ ಡಿಸಿ ಶಿಲ್ಪಾ ಶರ್ಮಾ ಭೇಟಿ, ಪರಿಶೀಲನೆ

Date:

ಕುಡಿಯುವ ನೀರಿನ ಸಮಸ್ಯೆ ತಲೆದೋರಿದ ಔರಾದ್ ತಾಲ್ಲೂಕಿನ ವಡಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋರಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಕಳೆದ ಒಂದೆರಡು ತಿಂಗಳಿನಿಂದ ನೀರಿನ ಅಭಾವದಿಂದ ಗ್ರಾಮಸ್ಥರು ನೀರಿಗಾಗಿ ದೂರದ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿ ಉದ್ಭವಿಸಿರುವ ಕುರಿತು ಏ.27ರಂದು ‘ಈದಿನ.ಕಾಮ್’ ನಲ್ಲಿ ‘ನಮ್ಗ ಅನ್ನ ಕೊಡಬೇಡ್ರಿ; ಕುಡಿಯೋಕೆ ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ!’ ತಲೆಬರಹದಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳ ತಂಡದೊಂದಿಗೆ ಇಂದು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು. ನೀರು ಸರಬರಾಜು ಮಾಡುವ ಖಾಸಗಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಇರುವ ಬಾವಿಗೆ ತೆರಳಿ ಪರಿಶೀಲನೆ ನಡೆಸಿದರು. ಸರ್ಕಾರಿ ಬಾವಿ ಇದ್ದರೂ ನೀರು ಜನರಿಗೆ ನೀರು ಕೊಡಲು ಒಪ್ಪದಿರುವ ವ್ಯಕ್ತಿಯೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದರು.

ಜಿಲ್ಲಾಧಿಕಾರಿ ಎದುರು ಗೋಳು ತೋಡಿಕೊಂಡ ಮಹಿಳೆಯರು

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋರಳ್ಳಿ ಗ್ರಾಮಕ್ಕೆ ಭೇಟಿ ನೀಡಿ ವಾಪಸ್ ಹೋಗುತ್ತಿದ್ದ ವೇಳೆ ಮಹಿಳೆಯರು ಡಿಸಿ ಅವರ ಕಾರು ನಿಲ್ಲಿಸಿ ನೀರಿನ ಬವಣೆ ಬಗ್ಗೆ ಗೋಳು ತೋಡಿಕೊಂಡರು.

1005122986

‘ನಮ್ಗ ನೀರಿನ ಹೈರಾಣ ಭಾಳ ಆಗಿದೆ. ದಿನಾಲೂ ಸುಡು ಬಿಸಿಲಿನಲ್ಲಿ ನೀರಿಗಾಗಿ ಖಾಲಿ ಕೊಡ ಹಿಡಿದು ದೂರದ ಬೋರವೆಲ್, ಬಾವಿಗಳಿಗೆ ಅಲೆದಾಡುತ್ತಿದ್ದೇವೆ. ನೀರಿನ ಪರದಾಟದಿಂದ ಸಮಯಕ್ಕೆ ಹೊಟ್ಟೆಗೆ ಅನ್ನ ಸಿಗುತ್ತಿಲ್ಲ. ಪುಟ್ಟ ಪುಟ್ಟ ಮಕ್ಕಳಿಗೂ ನೀರಿನ ತಾಪತ್ರಯ ತಪ್ಪುತ್ತಿಲ್ಲ. ನಾವು ಹೇಗೆ ಮಾಡಬೇಕು? ಏನಾದರೂ ಮಾಡಿ ನಮಗೆ ನೀರಿನ ವ್ಯವಸ್ಥೆ ಮಾಡಿ ಮೇಡಂ’ ಎಂದು ಮಹಿಳೆಯರು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಎದುರು ಸಂಕಟ ಹೇಳಿಕೊಂಡರು.

ಈ ಕುರಿತು ‘ಈದಿನ‘ ಜೊತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ‘ಸೋರಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಬಾವಿಯ ನೀರು ಕೊಡಲು ಒಪ್ಪದಿರುವ ವ್ಯಕ್ತಿಗೆ ನೋಟಿಸ್ ನೀಡುವ ಬಗ್ಗೆ ಯೋಚಿಸುತ್ತಿದ್ದೇವೆ. ಒಂದೆರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಬಳಿಕ ಜಮಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಂಬಗಿ, ಬಾರ್ಡರ್ ತಾಂಡಾಕ್ಕೆ (ವಿಜಯನಗರ), ಏಕಲಾರ ತಾಂಡಾ, ಕಿರುಗುನವಾಡಿ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಅವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಬೇಸಿಗೆಯಲ್ಲಿ ಯಾವುದೇ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇದನ್ನೂ ಓದಿ : ಬೀದರ್‌ | ನಮ್ಗ ಅನ್ನ ಕೊಡಬೇಡ್ರಿ; ಕುಡಿಯೋಕೆ ನೀರು ಕೊಟ್ಟು ಪುಣ್ಯ ಕಟ್ಟಿಕೊಳ್ಳಿ!

ಈ ಸಂದರ್ಭದಲ್ಲಿ ಔರಾದ್ ತಹಸೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ರಾಠೋಡ ಸೇರಿದಂತೆ ಗ್ರಾಮ ಪಂಚಾಯತ್, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸೋರಳ್ಳಿ ಗ್ರಾಮದಲ್ಲಿ ಡಿಸಿ ಅವರೊಂದಿಗೆ ಮಹಿಳೆಯರು ನೀರಿನ ಸಮಸ್ಯೆ ಬಗೆಹರಿಸಲು ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...