ಬಸವಕಲ್ಯಾಣ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

Date:

ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಗ್ರಾಮ ಪಂಚಾಯತ್ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಾಗೂ ಗ್ರಾಮ ಕ್ರಾಂತಿ ಸೇನೆ ಟ್ರಸ್ಟ್ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ ಮತ್ತು ಅರಿವು ಮೂಡಿಸುವ ವಿಚಾರಗೋಷ್ಠಿ ಹಾಗೂ ಕಲಾ ಜಾಥಾ ಕಾರ್ಯಕ್ರಮ ಆಯೋಜಿಸಲಾಯಿತು.

- Advertisement -

ಭಾಲ್ಕಿಯ ಹಿರಿಯ ವಕೀಲ ಧನರಾಜ ಸೂರ್ಯವಂಶಿ ಮಾತನಾಡಿ, ʼಸಮಾಜದಲ್ಲಿ ಅಸ್ಪೃಶ್ಯರು ಅನುಭವಿಸಿದ ಪೀಡೆಗಳನ್ನು ಸ್ಮರಿಸಿ, ಇಂದಿನ ಕಾಲದಲ್ಲಿ ಅಸ್ಪೃಶ್ಯತೆ ಆಚರಿಸುವವರ ವಿರುದ್ಧ ಕಾನೂನಿನ ಮೂಲಕ ಹೇಗೆ ಶಿಕ್ಷೆ ವಿಧಿಸಬಹುದು ಎಂಬುದನ್ನು ವಿವರಿಸಿದರು. ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಕುರಿತು ಸರಳವಾಗಿ ತಿಳಿಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಬಸವಕಲ್ಯಾಣದ ವಕೀಲರಾದ ರಾಜೇಶ್ವರಿ ವರ್ಧನ ಮಾತನಾಡಿ, ದಲಿತರ ಪರವಾಗಿ ಇರುವ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯ ಹಾಗೂ ಉದ್ದೇಶಗಳನ್ನು ಸ್ಮರಿಸಿ, ಮಹಿಳೆಯರ ಪರವಾದ ಕಾನೂನುಗಳು ಹಾಗೂ ಮಹಿಳೆಯರ ಹಕ್ಕುಗಳ ಕುರಿತು ಮಹಿಳೆಯರಿಗೆ ವಿವರಿಸಿದರು.

ಡಾ.ಬಾಬಾ‌ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಬಸವಕಲ್ಯಾಣ ತಾಲೂಕ ಸಹಾಯಕ ನಿರ್ದೇಶಕ ದಿಲೀಪ ಉತ್ತಮ ಅಧ್ಯಕ್ಷತೆ ವಹಿಸಿದರು.

ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಉಪನಿರೀಕ್ಷಕ ಬಸವರಾಜ ಕೊಡಗೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೇವಣಸಿದ್ಧ ಜಮಾದಾರ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೆಹಬೂಬ್, ಮಹದೇವ ಗಾಯಕ್ವಾಡ್, ಶಂಕರ ಫುಲೆ, ಸುರೇಶ್ ಜಮ್ಮು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಗ್ರಾಮ ಕ್ರಾಂತಿ ಸೇನೆಯ ಅಧ್ಯಕ್ಷ ಸಂದೀಪ ಮುಕಿಂದೆ ವಂದಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಪ್ರಮುಖ ಮುಖಂಡರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಗ್ರಾಮ ಪಂಚಾಯತ್ ನೌಕರರು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಆನಂದವಾಡಿ ಗ್ರಾಮದಲ್ಲಿ ದೌರ್ಜನ್ಯ ತಡೆ ಕುರಿತು ಜಾಗೃತಿ :

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಗ್ರಾಮ ಕ್ರಾಂತಿ ಸೇನೆ ಟ್ರಸ್ಟ್ (ರಿ) ಸಂಯುಕ್ತಾಶ್ರಯದಲ್ಲಿ ಪ.ಜಾತಿ / ಪ.ಪಂಗಡ ದೌರ್ಜನ್ಯ ತಡೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹುಲಸೂರು ತಾಲೂಕಿನ ಆನಂದವಾಡಿ (ಹು) ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಯಿತು.

WhatsApp Image 2026 03 17 at 6.35.30 AM

ಈ ಸಂದರ್ಭದಲ್ಲಿ ಬಸವಕಲ್ಯಾಣದ ಹಿರಿಯ ವಕೀಲರಾದ ಭಾಸ್ಕರ ಕಾಂಬ್ಳೆ ಅವರು ದೌರ್ಜನ್ಯ ತಡೆ ಕಾಯ್ದೆ ಕುರಿತು ಗ್ರಾಮಸ್ಥರಿಗೆ ಅರಿವು ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಹುಲಸೂರು ಠಾಣೆಯ ಪೊಲೀಸ್ ಸಿಬ್ಬಂದಿ, ಮಿರಕಲ್ ಗ್ರಾಮ ಪಂಚಾಯತ್ ಸಿಬ್ಬಂದಿ, ಗ್ರಾಮ ಕ್ರಾಂತಿ ಸೇನೆಯ ಅಧ್ಯಕ್ಷ ಸಂದೀಪ್ ಮುಕಿಂದೆ ಹಾಗೂ ಗ್ರಾಮದ ಮುಖಂಡರು, ಮಹಿಳೆಯರು ಮತ್ತು ಯುವಕರು ಉಪಸ್ಥಿತರಿದ್ದರು.

ಇದನ್ನೂ ಓದಿ : ಚಿಟಗುಪ್ಪ | ಸಿಡಿಲು ಬಡಿದು ರೈತ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಾರದ ಮಳೆ, ಒಣಗಿದ ಬೆಳೆ : ಟ್ರ್ಯಾಕ್ಟರ್‌ನಿಂದ ಸೋಯಾಬೀನ್‌ ಬೆಳೆ ನಾಶಪಡಿಸಿದ ರೈತ

ಮಳೆ ಕೊರತೆಯಿಂದ ಬೆಳೆ ಬಾಡುತ್ತಿರುವುದನ್ನು ಕಂಡು ನಿರಾಸೆಗೊಂಡ ರೈತರೊಬ್ಬರು, ಮೂರು ಎಕರೆ...

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹ : 5ನೇ ದಿನ ಪೂರೈಸಿದ ಧರಣಿ ಸತ್ಯಾಗ್ರಹ

ಹುಲಸೂರ ತಾಲೂಕು ಬರಪೀಡಿತ ಘೋಷಿಸಬೇಕೆಂದು ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು...

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...

ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು...