ಭಾಲ್ಕಿ | ಭೀಮರಾಜ್ ಸೇನಾ ಸಂಘಟನೆಯಿಂದ ವೃದ್ಧರಿಗೆ ಮಾಸಿಕ ಪಿಂಚಣಿ

Date:

ಭೀಮರಾಜ್ ಸೇನಾ ಸಂಘಟನೆಯ ವತಿಯಿಂದ ಸಮಾಜಮುಖಿ ಕಾರ್ಯದ ಭಾಗವಾಗಿ ಗ್ರಾಮದ ಆರ್ಥಿಕವಾಗಿ ಹಿಂದುಳಿದ ಹಾಗೂ ನಿರ್ಗತಿಕ ವೃದ್ಧರಿಗೆ ಪ್ರತಿ ತಿಂಗಳು ಪಿಂಚಣಿ ವಿತರಿಸುವ ಮಹತ್ವದ ಯೋಜನೆಯನ್ನು ಆರಂಭಿಸಲಾಗಿದ್ದು,ಈಚೆಗೆ ಭಾಲ್ಕಿ ತಾಲೂಕಿನ ಡೊಣಗಾಪುರ ಗ್ರಾಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಮೊತ್ತ ವಿತರಿಸಲಾಯಿತು.

- Advertisement -

ಸಮಾಜದಲ್ಲಿ ವೃದ್ಧರು ಗೌರವ, ಘನತೆ ಹಾಗೂ ಸ್ವಾಭಿಮಾನದಿಂದ ಬದುಕು ನಡೆಸಲು ಸಹಕಾರಿಯಾಗಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಪ್ರತಿ ತಿಂಗಳು ಆಯ್ಕೆಯಾದ ವೃದ್ಧರಿಗೆ ಮಾಸಿಕ 500 ರೂ. ಪಿಂಚಣಿಯನ್ನು ನೀಡಲಾಗುವುದು. ಈ ಕಾರ್ಯಕ್ರಮವು ಕೇವಲ ಒಂದು ದಿನದ ಸೇವಾ ಕಾರ್ಯವಾಗಿರದೆ, ನಿರಂತರವಾಗಿ ಪ್ರತಿ ತಿಂಗಳು ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಹರ್ಷಿತ ದಾಂಡೇಕರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಭೀಮರಾಜ್ ಸೇನಾ ಸಂಘಟನೆಯು ಶಿಕ್ಷಣ, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತುವ ಮುಖಾಂತರ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸದಾ ಶ್ರಮಿಸುತ್ತಿದ್ದು, ವೃದ್ಧರ ಪಿಂಚಣಿ ಯೋಜನೆಯು ಸಹ ಅದರ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದರು.

WhatsApp Image 2026 06 14 at 2.45.32 PM 2

ಈ ಸಮಾಜಮುಖಿ ಸಹಾಯಹಸ್ತ ಕಂಡು ಗ್ರಾಮದ ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಸಂಘಟನೆಯ ಕಾರ್ಯವನ್ನು ಶ್ಲಾಘಿಸಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಆಶಿಸಿದ್ದಾರೆ. ಗ್ರಾಮದ ನಿರ್ಮಲಾ, ರೇವಮ್ಮ ಹಾಗೂ ಗೀತಾಬಾಯಿ ಎಂಬುವವರಿಗೆ ಪಿಂಚಣಿ ಮೊತ್ತ ವಿತರಿಸಿದರು.

ಇದನ್ನೂ ಓದಿ : ಕನೇರಿ ಶ್ರೀ ಬಸವಕಲ್ಯಾಣ ಪ್ರವೇಶಕ್ಕೆ ತಡೆ ನೀಡಿ : ಸಚಿವ ಈಶ್ವರ ಖಂಡ್ರೆಗೆ ಮನವಿ ಸಲ್ಲಿಸಿದ ಮಠಾಧೀಶರ ಒಕ್ಕೂಟ

ಈ ಸಂಧರ್ಭದಲ್ಲಿ ಭೀಮರಾಜ್ ಸೇನಾ ಸಂಘಟನೆಯ ಡೊಣಗಾಪುರ ಗ್ರಾಮ ಅಧ್ಯಕ್ಷ ಚಂದ್ರಕಾಂತ್ ಮೋರೆ, ಲಕ್ಷ್ಮಣ್, ಧೋಂಡಿಬಾ ನಾರೇ, ಶಿವಾಜಿ, ರಂಜಿತ್, ವಿಶಾಲ, ಕಪಿಲ್ ಧೋಂಡಿಬಾ ಗಾಯಕವಾಡ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...