ಭಾಲ್ಕಿ | ಕನೇರಿ ಸ್ವಾಮೀಜಿ ಬಸವಕಲ್ಯಾಣ ಪ್ರವೇಶಿಸಿದರೆ ಉಗ್ರ ಹೋರಾಟ : ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ

Date:

ಜೂ.28ರಂದು ಬಸವಕಲ್ಯಾಣದಲ್ಲಿ ನಡೆಸಲು ಉದ್ದೇಶಿಸಿರುವ “ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಹಾಪುರದ ಕಾಡಸಿದ್ದೇಶ್ವರ ಮಠದ ಕನೇರಿ ಸ್ವಾಮೀಜಿಯವರ ಪ್ರವೇಶವನ್ನು ತಡೆಯುವಂತೆ  ವಿವಿಧ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿ ಆಗ್ರಹಿಸಿದೆ.

- Advertisement -

ಈ ಸಂಬಂಧ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿಗಳಿಗೆ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಗಗನ ಫುಲೆ ಮಾತನಾಡಿ, “ಬಸವ ಭಕ್ತರನ್ನು ʼಬಸವ ತಾಲಿಬಾನಿʼ ಎಂದು ಪದ ಪ್ರಯೋಗ ಮಾಡಿ ಅವಮಾನಿಸಿರುವುದು ಹಾಗೂ ಬಸವತತ್ವ ಮತ್ತು ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರಚಾರ ಮಾಡುತ್ತಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ. ಸುಪ್ರೀಂ ಕೋರ್ಟ್‌ನಿಂದಲೂ ಟೀಕೆಗೆ ಗುರಿಯಾಗಿರುವ ಕನೇರಿ ಸ್ವಾಮೀಜಿಯವರ ನಡೆ ಬಸವ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ ಕನೇರಿ ಸ್ವಾಮೀಜಿಗೆ ಬಸವಕಲ್ಯಾಣ ಪ್ರವೇಶ ನೀಡಬಾರದು” ಎಂದು ಹೇಳಿದರು.

“ಸರ್ಕಾರ ಹಾಗೂ ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಮತ್ತು ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಧಕ್ಕೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಕನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡದಂತೆ ಕ್ರಮವಹಿಸಬೇಕು” ಎಂದು ಆಗ್ರಹಿಸಿದರು.

ಒಂದು ವೇಳೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದಲ್ಲಿ ಬಸವ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರ ಜೊತೆಗೆ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸವಾಲುಗಳು ಎದುರಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರವು ಸೂಕ್ತ ಕ್ರಮ ಕೈಗೊಳ್ಳಬೇಕು. ಜೂ.28ಕ್ಕೆ ಕನೇರಿ ಸ್ವಾಮೀಜಿ ಬಸವಕಲ್ಯಾಣ ಪ್ರವೇಶಿಸಿದರೆ ನಮ್ಮ ಸಂಘಟನೆಯಿಂದ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಸೋರುವ ಕೊಠಡಿ, ಶಿಕ್ಷಕರ ಕೊರತೆ : ಆತಂಕದಲ್ಲಿ ಮಕ್ಕಳ ಕಲಿಕೆ!

ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಲ್ಲಪ್ಪ ಮರೂರ ಸೇರಿದಂತೆ ಸಾಮಾಜಿಕ ಕಾರ್ಯಕರ್ತರಾದ ಶ್ರೀಮಂತ ಭೋಸ್ಲೆ, ಜೈವರ್ಧನ ಫುಲೆ, ಶಿವರಾಜ್ ಚೆಲ್ವಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...