ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

Date:

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ (ಇಂಚೂರ್ ಟ್ರೀ ಪಾರ್ಕ್) ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಉದ್ಘಾಟಿಸಿದರು.

- Advertisement -

ಅರಣ್ಯ ಇಲಾಖೆ, ಪ್ರಾದೇಶಿಕ ಅರಣ್ಯ ವಿಭಾಗ, ಬೀದರ ಹಾಗೂ ಪ್ರಾದೇಶಿಕ ಅರಣ್ಯ ವಲಯ ಭಾಲ್ಕಿ ಸಹಯೋಗದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಉದ್ಯಾವನಕ್ಕೆ ಚಾಲನೆ ನೀಡಿ ಮಾತನಾಡಿ, “ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪರೀತ್ಯದಿಂದ ನಾವು ಸಾಕಷ್ಟು ಅಪಾಯವನ್ನು ಎದುರಿಸುತ್ತೇವೆ ಆದ್ದರಿಂದ ಹಸಿರು ಹೊದಿಕೆ ಹೆಚ್ಚಿಸುವುದು ಮತ್ತು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವುದು ಇಂದಿನ ತುರ್ತು ಅಗತ್ಯ” ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಭಾಲ್ಕಿ ತಾಲೂಕಿನ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಮಕ್ಕಳಿಗಾಗಿ ಇಂಚೂರ ಗ್ರಾಮದಲ್ಲಿ ಸುಸಜ್ಜಿತ ನೂತನ ವೃಕ್ಷೋದ್ಯಾನವನ್ನು ನಿರ್ಮಿಸಲಾಗಿದ್ದು ಎಲ್ಲರೂ ಇದರ ಸದುಪಯೋಗ ಪಡೆಯಬೇಕು. ಮೈಸೂರಿನ ಬೃಂದಾವನದ ಮಾದರಿಯಲ್ಲೇ ಇಲ್ಲಿಯೂ ಸಂಜೆ ವೇಳೆ ಸಾರ್ವಜನಿಕರನ್ನು ಸೆಳೆಯಲು ವರ್ಣರಂಜಿತ ಸಂಗೀತ ಕಾರಂಜಿ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

WhatsApp Image 2026 09 17 at 6.36.40 AM

ಈ ವೃಕ್ಷೋದ್ಯಾನದಲ್ಲಿ 250ಕ್ಕೂ ಹೆಚ್ಚು ಪ್ರಭೇದಗಳ ಸಸಿಗಳನ್ನು ನೆಡಲಾಗಿದ್ದು, ಮುಂದಿನ ದಿನಗಳಲ್ಲಿ ‘ಮಿಯಾವಾಕಿ’ ಮಾದರಿಯಲ್ಲಿ 10,000 ಸಸಿಗಳನ್ನು ನೆಡುವ ಉದ್ದೇಶವಿದೆ. ಪ್ರತಿ ಸಸಿಯ ಮುಂದೆ ವೈಜ್ಞಾನಿಕ ಹೆಸರು, ಜೀವಿತಾವಧಿ ಹಾಗೂ ಔಷಧೀಯ ಪ್ರಯೋಜನಗಳ ಮಾಹಿತಿ ಫಲಕ ಅಳವಡಿಸಲಾಗಿದ್ದು, ಮಕ್ಕಳಿಗೆ ಮಾರ್ಗದರ್ಶನ ನೀಡಲು ಗೈಡ್‌ಗಳ ವ್ಯವಸ್ಥೆಯೂ ಇರಲಿದೆ. ಉದ್ಯಾನದಲ್ಲಿ ಪ್ಲಾಸ್ಟಿಕ್, ಕಸ ತರುವುದನ್ನು ಸಂಪೂರ್ಣ ನಿಷೇಧಿಸಲಾಗುವುದು, ಉದ್ಯಾನವನ್ನು ಸ್ವಂತ ಮನೆಯಂತೆ ಕಾಪಾಡಬೇಕು” ಎಂದರು.

ಬೀದರ್ ಜಿಲ್ಲೆಯ ಪ್ರತಿ ತಾಲೂಕಿಗೆ ತಲಾ 2 ಕೋಟಿ ವೆಚ್ಚದಲ್ಲಿ ಪಾರ್ಕ ಕಚೇರಿ, ಭಾಲ್ಕಿ 2 ಹಾಗೂ ಬೀದರ್‌ನಲ್ಲಿ 5 ಕೋಟಿ ವೆಚ್ಚದ ಅರಣ್ಯ ಭವನ ಹಾಗೂ ಹೊನ್ನಿಕೇರಿಯಲ್ಲಿ 15 ಕೋಟಿ ವೆಚ್ಚದ ಪರಿಸರ ಪ್ರವಾಸೋದ್ಯಮ ನಿರ್ಮಿಸಲಾಗುತ್ತಿದೆ ಎಂದು‌ ಹೇಳಿದರು.

WhatsApp Image 2026 09 17 at 6.39.32 AM

ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ರಾಮಾಯಣ, ಮಹಾಭಾರತ ನಡೆದದ್ದು ಪ್ರಕೃತಿಯಲ್ಲಿ, ಬುದ್ಧನಿಗೆ ಜ್ಯಾನೋದಯ ಆಗಿದ್ದು ಮರದ ಕೆಳಗಡೆ. ಇದೀಗ ಇಂಚೂಎ ಗ್ರಾಮದ ಹತ್ತಿರ 13 ಎಕರೆ ಭೂಮಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರ ಹೆಸರಲ್ಲಿ ವೃಕ್ಷೋಧ್ಯಾನ ನಿರ್ಮಾಣ ಮಾಡಿದ್ದೂ ಖುಷಿಯ ಸಂಗತಿಯಾಗಿದೆ. ಮನಸ್ಸಿನ ಆನಂದ ನೀಡುವ ನೆಮ್ಮದಿಯ ತಾಣ ಇದಾಗಿದೆ” ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ ಮಾತನಾಡಿ, “ನಮ್ಮದು ಅರಣ್ಯ, ಮರ, ಮಳೆ ಕಡಿಮೆ ಇರುವ ಭೂಭಾಗವಾಗಿದೆ. ಇಂತಹ ಭಾಗದಲ್ಲಿ ಟ್ರೀ ಪಾರ್ಕ್ ನಿರ್ಮಾಣ ಮಾಡಿದ್ದು ಸಂತಸ ತಂದಿದೆ. ದಿನಾಲೂ ಸಾವಿರಾರು ವಿದ್ಯಾರ್ಥಿಗಳು, ಜನರು ಬಂದು ನೋಡುವ ಪ್ರೇಕ್ಷಣಿಕ ಸ್ಥಳ ಆಗಬಹುದು. ಕಾರಂಜಾ ಜಲಾಶಯ ಹತ್ತಿರ ಬೃಂದಾವನದ ಮಾದರಿಯಲ್ಲಿ ಉದ್ಯಾನವನ ನಿರ್ಮಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

WhatsApp Image 2026 09 17 at 6.40.49 AM
ಜಾಹೀರಾತು

ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಕಾರ್ಯಕ್ರಮದ ಸಾನಿಧ್ಯ ವಹಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್, ಕಲಬುರಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ಹಣಮಂತರಾವ್ ಚವ್ಹಾಣ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ., ಬೀದರ್ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುಮಿತಕುಮಾರ ಪಾಟೀಲ್, ಶ್ರೀನಿವಾಸ್ ಯಾರಡೋಣಿ, ಭಾಲ್ಕಿ ವಲಯ ಅರಣ್ಯಧಿಕಾರಿ ಸಚಿನ್ ಪಾಟೀಲ್, ವಿರೇಶ ಕಲ್ಯಾಣೆ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಯುಪಿಎಸ್‌ಸಿ ನಿಯಮಾವಳಿ, ಪ್ರಕ್ರಿಯೆಗಳನ್ನು ಕೆಪಿಎಸ್‌ಸಿಯಲ್ಲಿ ಅಳವಡಿಸಿ: ಸಿಎಂ ಡಿಕೆಶಿಗೆ ಕಾಂಗ್ರೆಸ್ ಮುಖಂಡರ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...