ಬೀದರ್‌ | ಕೆಕೆಆರ್‌ಟಿಸಿ ಸುತ್ತೋಲೆ ಸಮರ್ಪಕ ಜಾರಿಗೆ ತನ್ನಿ : ಮಜ್ದೂರ್‌ ಸಂಘ ಮನವಿ

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುತ್ತೋಲೆ ಸಂಖ್ಯೆ 90/2024 ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಕೆಲ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಆಗ್ರಹಿಸಿದೆ.

- Advertisement -

ಸಂಘದ ಬೀದರ್ ಘಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದ ಮನವಿ ಪತ್ರವನ್ನು ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಬಿ. ಜಾಧವ್ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

“ಘಟಕ ವ್ಯವಸ್ಥಾಪಕರು ಸುತ್ತೋಲೆ ಅನ್ವಯ ಅವಶ್ಯಕತೆಗೆ ಅನುಗುಣವಾಗಿ ರಜೆ ಮಂಜೂರು ಮಾಡದಿರುವುದರಿಂದ ಸಿಬ್ಬಂದಿಗೆ ಬಹಳ ತೊಂದರೆಯಾಗುತ್ತಿದೆ. ಚಾಲನಾ ಸಿಬ್ಬಂದಿಗೆ ತುರ್ತು ರಜೆ ಪಡೆಯುವಲ್ಲಿ ಆಗುತ್ತಿರುವ ಅನಾನುಕೂಲ ನಿವಾರಿಸಬೇಕು. ವಾರದಲ್ಲಿ ಒಂದು ದಿನ ಗೈರಾದರೂ ವಾರದ ರಜೆ ನೀಡಬೇಕು. ಓಟಿ ಸೌಲಭ್ಯ ಕಲ್ಪಿಸಬೇಕು. ಘಟಕಗಳಿಗೆ ಬಿಡಿಭಾಗಗಳನ್ನು ಸರಿಯಾಗಿ ಸರಬರಾಜು ಮಾಡಬೇಕು” ಎಂದು ಒತ್ತಾಯಿಸಿದರು.

“ಎಲ್ಲ ಬಸ್‍ಗಳಲ್ಲಿ ಇಟಿಎಂ ಚಾರ್ಜರ್ ಅಳವಡಿಸಬೇಕು. ಅಗತ್ಯ ಮೂಲಸೌಕರ್ಯಗಳಿಲ್ಲದೇ ಇರುವುದರಿಂದ ರಾತ್ರಿ ಪಾಳಿಯಲ್ಲಿ ತಂಗುವ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದು, ನಗರದ ಕೇಂದ್ರ ಬಸ್ ನಿಲ್ದಾಣದ ಮೊದಲ ಮಹಡಿಯ ಸ್ಥಳವನ್ನು ಸಂಚಾರ ಸಿಬ್ಬಂದಿಯ ವಿಶ್ರಾಂತಿ ಗೃಹವಾಗಿ ಪರಿವರ್ತಿಸಬೇಕು. ಸಿಬ್ಬಂದಿಗೆ ಅನಗತ್ಯವಾಗಿ ಮಾನಸಿಕ ಕಿರುಕುಳ ಕೊಡಬಾರದು. ಎಚ್.ಆರ್.ಎಂ.ಎಸ್. ತಂತ್ರಜ್ಞಾನವನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎನ್ನುವುದು ಸೇರಿದಂತೆ 12 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು. 15 ದಿನಗಳಲ್ಲಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಮೂವರು ಮಕ್ಕಳ ಮದುವೆ, ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳುವೆ : ಶಾಸಕ ಪ್ರಭು ಚವ್ಹಾಣ

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಗಣಪತಿ ಸಕರೆಪ್ಪನೋರ, ಬೀದರ್ ಘಟಕದ ಅಧ್ಯಕ್ಷ ಜಾನ್ಸನ್ ಜನವಾಡಕರ್, ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿತಾಳಗೇರಾ, ಎಸ್.ಸಿ, ಎಸ್.ಟಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಟೈಗರ್, ಪದಾಧಿಕಾರಿಗಳಾದ ಧನಶೆಟ್ಟಿ ಮನ್ನಾಳೆ, ಮಲ್ಲಿಕಾರ್ಜುನ ಪಾಟೀಲ, ಬಸವರಾಜ ಜ್ಯಾಂತೆ, ಪಂಡಿತ ಜನವಾಡ, ವೈಜಿನಾಥ ಚಾಮಾ, ರಾಹುಲ್ ಕಂಟೆ, ಕೈಲಾಸಯ್ಯ ಸ್ವಾಮಿ, ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ಘಟಕಗಳ ಹಲವರು ಮುಖಂಡರು ಹಾಗೂ ನೌಕರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಅಸ್ಸಲಾಮು ಅಲೈಕುಂ’ ‘ಜಜಾಕಲ್ಲಾ’ ಎಂದಿದ್ದಕೆ ಐಪಿಎಸ್ ಅಧಿಕಾರಿ ಎತ್ತಂಗಡಿ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

ಸಾಮಾಜಿಕ ಜಾಲತಾಣದ ವಿಡಿಯೊವೊಂದರಲ್ಲಿ 'ಅಸ್ಸಲಾಮು ಅಲೈಕುಂ'(ನಿಮಗೆ ಶಾಂತಿಯಾಗಲಿ), 'ಇನ್ಶಾ ಅಲ್ಲಾ'(ದೇವರು ಇಚ್ಛಿಸಿದರೆ)...

ವಿಚ್ಛೇದನ ಪಡೆದರೂ ಮಕ್ಕಳಿಗೆ ಉತ್ತಮ ತಂದೆ-ತಾಯಿಯಾಗಿರಿ: ಹೈಕೋರ್ಟ್ ಸಲಹೆ

"ವಿಚ್ಛೇದನದ ನಂತರವೂ ಮಕ್ಕಳ ಮುಂದೆ ಪರಸ್ಪರ ನಿಂದಿಸದೆ, ಅವರಿಗೆ ಉತ್ತಮ ತಂದೆ-ತಾಯಿಯಾಗಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...