ಬೀದರ್‌ | ಜನಪರ ಸಾಹಿತ್ಯ, ಹೋರಾಟದ ಪ್ರತೀಕ ಅಣ್ಣಾಭಾವು ಸಾಠೆ

Date:

ಭಾರತ ಕಮ್ಯೂನಿಷ್ಟ ಪಕ್ಷ (ಸಿಪಿಐ) ಜಿಲ್ಲಾ ಮಂಡಳಿ ವತಿಯಿಂದ ಸಾಹಿತ್ಯ ರತ್ನ ಅಣ್ಣಾಭಾವು ಸಾಠೆ ಅವರ 106ನೇ ಜನ್ಮದಿನದ ಪ್ರಯುಕ್ತ ಶನಿವಾರ ಬೀದರ್ ನಗರದ ಸ್ಟಾರ್ ಲಾಡ್ಜ್ ಸಭಾಂಗಣದಲ್ಲಿ ಅಣ್ಣಾಭಾವು ಸಾಠೆ ದ್ವಿತೀಯ ಸಾಹಿತ್ಯ ಸಮ್ಮೇಳನ ಆಯೋಜಿಸಲಾಯಿತು.

- Advertisement -

ಚಿಂತಕ ಜಗದೀಶ ಬಿರಾದಾರ ಅವರು ಸಮ್ಮೇಳನ ಉದ್ಘಾಟಿಸಿ ಮಾತನಾಡಿ, “ಅಣ್ಣಾಭಾವು ಸಾಠೆ ಅವರ ಸಾಹಿತ್ಯವು ಶೋಷಿತ ಹಾಗೂ ದುಡಿಯುವ ವರ್ಗಗಳ ಬದುಕಿನ ನೈಜ ಚಿತ್ರಣವಾಗಿದ್ದು, ಅವರ ಪ್ರಸಿದ್ಧ ʼಫಕೀರಾʼ ಕಾದಂಬರಿ ಸಾಹಿತ್ಯ ಲೋಕದಲ್ಲಷ್ಟೇ ಅಲ್ಲದೆ ಚಲನಚಿತ್ರ ರೂಪದಲ್ಲಿಯೂ ಜನಮನ ಗೆದ್ದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವಕೀಲ ಬಾಬುರಾವ ಹೊನ್ನಾ ಮಾತನಾಡಿ, “ಅಣ್ಣಾಭಾವು ಸಾಠೆ ಅವರು ಮಹಾರಾಷ್ಟ್ರದಲ್ಲಿ ಭಾರತ ಕಮ್ಯೂನಿಷ್ಟ ಪಕ್ಷದ ಮೂಲಕ ಜನಪರ ಚಳುವಳಿಗಳನ್ನು ಸಂಘಟಿಸಿ ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸಿದ ಮಹಾನ್ ನಾಯಕ ಮತ್ತು ಜನಪರ ಸಾಹಿತಿಯಾಗಿದ್ದರು” ಎಂದರು.

“ʼಜಗತ್ತು ಕಾರ್ಮಿಕರ ಶ್ರಮದ ಮೇಲೆ ನಿಂತಿದೆʼ ಎಂಬ ಅಣ್ಣಾಭಾವು ಸಾಠೆ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿದ್ದು, ಸಾಮಾಜಿಕ ಸಮಾನತೆ ಮತ್ತು ಶ್ರಮಕ್ಕೆ ಗೌರವ ನೀಡುವ ಸಂದೇಶವನ್ನು ಸಮಾಜಕ್ಕೆ ಸಾರುತ್ತದೆ. ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಮಾರ್ಗವನ್ನು ಅನುಸರಿಸುವ ದೃಢ ಸಂಕಲ್ಪವನ್ನು ಅಣ್ಣಾಭಾವು ಸಾಠೆ ಹೊಂದಿದ್ದರು” ಎಂದು ಅಭಿಪ್ರಾಯಪಟ್ಟರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ನಜೀರ ಅಹ್ಮದ್ ಚೊಂಡಿ ಪ್ರಸ್ತಾವಿಕವಾಗಿ ಮಾತನಾಡಿ, “ಅಣ್ಣಾಭಾವು ಸಾಠೆ ಅವರ ಸಾಹಿತ್ಯ, ಹೋರಾಟ ಮತ್ತು ಸಾಮಾಜಿಕ ಚಿಂತನೆಗಳು ಇಂದಿನ ಪೀಳಿಗೆಗೆ ಪ್ರೇರಣೆಯಾಗಿವೆ” ಎಂದು ಹೇಳಿದರು.

ಇದನ್ನೂ ಓದಿ : ಬೀದರ್ ಮಹಾನಗರ ಮುಖ್ಯರಸ್ತೆಗಳ ಅಂದ ಕಸಿದ ಗುಂಡಿಗಳು!

ಸಮ್ಮೇಳನದ ಅಧ್ಯಕ್ಷತೆಯನ್ನು ಅಖಿಲ ಭಾರತ ಕಿಸಾನ್ ಸಭಾ ಮುಖಂಡ ಸೂರ್ಯಕಾಂತ ಮದಕಟ್ಟಿ ವಹಿಸಿದ್ದರು. ಸಹ ಕಾರ್ಯದರ್ಶಿ ಶಫಾಯತ್ ಅಲಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...