ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ ದಿನದ ಅಂಗವಾಗಿ 2026-27ನೇ ಸಾಲಿನ ದೀಕ್ಷಾಭೂಮಿ ಯಾತ್ರೆಗೆ ಅರ್ಹ ಯಾತ್ರಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿಗಳಿಗಾಗಿ ಬೀದರ್ ಜಿಲ್ಲೆಯಿಂದ ಅಕ್ಟೋಬರ್ 19 ರಿಂದ 22ರವರೆಗೆ ನಾಗಪುರಕ್ಕೆ ತೆರಳಿ ಮರಳಲು ಬಸ್ ಹಾಗೂ ರೈಲು ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಅರ್ಹ ಯಾತ್ರಾರ್ಥಿಗಳು ಸೆ.19ರಿಂದ ಅ.9ರೊಳಗೆ ಸಮಾಜ ಕಲ್ಯಾಣ ಇಲಾಖೆಯ sw.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಬೀದರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಔರಾದ್ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ
This video cannot be played in your browser. Open the video directly






