ಬೀದರ್ | ಬೈಸಿಕಲ್‌ನಲ್ಲಿ ಕಚೇರಿಗೆ ತೆರಳಿ ಗಮನ ಸೆಳೆದ ಡಿಸಿ, ಎಸ್‌ಪಿ

Date:

Advertisements

ಬೈಸಿಕಲ್‌ ಬಳಸುವುದು ಆರೋಗ್ಯಕ್ಕೂ, ಪರಿಸರಕ್ಕೂ ಒಳ್ಳೆಯದು ಎಂದಿರುವ ಬೀದಿರ್ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಸೋಮವಾರ ತಮ್ಮ ಕಚೇರಿಗಳಿಗೆ ಬೈಸಿಕಲ್‌ನಲ್ಲಿ ತೆರಳಿದ್ದಾರೆ. ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಬೀದರ್‌ನ ಬಹಮನಿ ಕೋಟೆಯ ಬಳಿ ಇರುವ ತಮ್ಮ ನಿವಾಸಗಳಿಂದ ತಮ್ಮ ಕಚೇರಿಗಳಿಗೆ ಇಬ್ಬರು ಅಧಿಕಾರಿಗಳೂ ಬೈಸಿಕಲ್‌ನಲ್ಲಿ ಹೋಗಿದ್ದಾರೆ. ಅವರು ಬೈಸಿಕಲ್ ತುಳಿಯುತ್ತಿದ್ದುದ್ದನ್ನು ಕಂಡು ಸಾರ್ವಜನಿಕರು ಆಶ್ಚರ್ಯದಿಂದ ನೋಡಿದ್ದಾರೆ.

“ಬೈಸಿಕಲ್ ಬಳಸುವುದರಿಮದ ಆರೋಗ್ಯ ಉತ್ತಮವಾಗಿರುತ್ತದೆ. ಪರಿಸರಕ್ಕೂ ಒಳ್ಳೆಯದು. ಹೀಗಾಗಿ, ನಾನು ಮತ್ತು ಎಸ್‌ಪಿ ಅವರು ಬೈಸಿಕಲ್‌ನಲ್ಲಿ ಕಚೇರಿಗೆ ಬಂದಿದ್ದೇವೆ” ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದ್ದಾರೆ.

Advertisements

“ಪೋಷಕರು ತಮ್ಮ ಮಕ್ಕಳಿಗೆ ಬೈಕ್‌ ಕೊಡಿಸುವ ಬದಲು ಬೈಸಿಕಲ್ ಕೊಡಿಸಬೇಕು. ಇದರಿಂದ, ಅಪ್ರಾಪ್ತರಿಗೆ ಆಗುವ ಅಪಘಾತಗಳನ್ನು ತಪ್ಪಿಸಬಹುದು” ಎಂದಿದ್ದಾರೆ.

“ಶಾಲಾ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬೈಸಿಕಲ್‌ಗಳನ್ನು ಉಪಯೋಗಿಸಬೇಕು. ಪೋಷಕರು ಕೂಡ ತಮ್ಮ ಮಕ್ಕಳಿಗೆ ಬೈಸಿಕಲ್‌ಗಳನ್ನೇ ಕೊಡಿಸಬೇಕು” ಎಂದು ಎಸ್‌ಪಿ ಚನ್ನಬಸವಣ್ಣ ಎಸ್‌.ಎಲ್‌ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

Download Eedina App Android / iOS

X