ಬೀದರ್‌ | ವೃದ್ದಾಪ್ಯ, ವಿಧವಾ, ವಿಕಲಚೇತನ ಪಿಂಚಣಿ ಬಿಡುಗಡೆಗೆ ಒತ್ತಾಯ

Date:

ರಾಜ್ಯ ಸರ್ಕಾರದಿಂದ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವೃದ್ದಾಪ್ಯ, ವಿಧವೆ ಹಾಗೂ ಅಂಗವಿಕಲ ಪಿಂಚಣಿ ಹಣ ಕೆಲ ತಿಂಗಳುಗಳಿಂದ ಬಾರದಿರುವ ಕಾರಣ ವಯಸ್ಸಾದ ವೃದ್ಧರು, ಅಸಹಾಯಕ ಮಹಿಳೆಯರು, ವಿಕಲಚೇತನರು ನಿತ್ಯ ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಹಾಗೂ ದಲಿತ ಕಲಾ ಮಂಡಳಿ ಜಿಲ್ಲಾ ಸಂಚಾಲಕ ಶಿವರಾಜ ತಡಪಳ್ಳಿ ಆರೋಪಿಸಿದರು.

- Advertisement -

ಈ ಕುರಿತು ಬುಧವಾರ ಬೀದರ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, “ವೃದ್ದಾಪ್ಯ, ವಿಧವಾ, ಅಂಗವಿಕಲ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಹಣ ಫಲಾನುಭವಿಗಳ ಬ್ಯಾಂಕ್ ಹಾಗೂ ಅಂಚೆ ಖಾತೆಗಳಿಗೆ ಸಕಾಲದಲ್ಲಿ ಸಕಾಲಕ್ಕೆ ಜಮೆಯಾಗುತ್ತಿಲ್ಲ. ಇದರಿಂದ ಫಲಾನುಭವಿಗಳು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಬಿಟ್ಟು ತಹಸೀಲ್ದಾರ್, ಬ್ಯಾಂಕ್‌ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಸರ್ಕಾರದ ಈ ಯೋಜನೆಗಳ ಮೇಲೆ ಸಾವಿರಾರು ಬಡ, ನಿರ್ಗತಿಕ ಕುಟುಂಬಗಳು ಅವಲಂಬಿತವಾಗಿದ್ದು, ಪ್ರತಿ ತಿಂಗಳು ಜಮೆಯಾಗುವ ಪಿಂಚಣಿ ಹಣವೇ ತಮ್ಮ ಬದುಕಿಗೆ ಆಧಾರವಾಗಿದೆ. ಆದರೆ ನಿಗದಿತ ಸಮಯಕ್ಕೆ ಮಸಾಶನ ಹಣ ಜಮೆಯಾಗದೇ ವಿಳಂಬ ಆಗುಗುತ್ತಿರುವುದರಿಂದ ಅಸಹಾಯಕರಾದ ಪಿಂಚಣಿದಾರರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

ಫಲಾನುಭವಿಗಳ ಖಾತೆಗಳಿಗೆ ಮಾಸಿಕ ಪಿಂಚಣಿ ಹಣವನ್ನು ನಿಯಮಿತವಾಗಿ ಸಕಾಲದಲ್ಲಿ ಜಮೆಯಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. ಬಾಕಿ ಇರುವ ಎಲ್ಲಾ ಪಿಂಚಣಿಯನ್ನು ಕೂಡಲೇ ಬಿಡುಗಡೆಗೊಳಿಸಿ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪಿಂಚಣಿ ಹಣ ಬಿಡುಗಡೆಗೆ ನಿರ್ಲಕ್ಷ್ಯ ತೋರಿದರೆ ತಹಸೀಲ್ದಾರ್ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗುವುದು ಎಂದು ಶಿವರಾಜ ತಡಪಳ್ಳಿ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...