ಬೀದರ್‌ | ಕಾರ್ಮಿಕ ವಿರೋಧ ವಿಬಿ-ಜಿರಾಮ್‌ಜಿ ಹಿಂಪಡೆಯಲು ಆಗ್ರಹ

Date:

ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕಾಗಿದ್ದ ಮನರೇಗಾ ಕಾನೂನನ್ನು ರದ್ದುಗೊಳಿಸಿ ಉದ್ಯೋಗವನ್ನು ಕೇಂದ್ರ ಸರಕಾರದ ಮರ್ಜಿಗೆ ಒಳಪಡಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಹೊಸ ಕಾನೂನು ವಿಬಿ-ಜಿರಾಮ್‌ಜಿ ಸಂಪೂರ್ಣ ಕಾರ್ಮಿಕ ವಿರೋಧಿಯಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಮನರೇಗಾ ಉಳಿಸಿ ಆಂದೋಲನದ ಜಿಲ್ಲಾ ಸಮಿತಿ ಆಗ್ರಹಿಸಿದೆ.

- Advertisement -

ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಮನವಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ʼಕನಿಷ್ಟ ವೇತನದ ಹಕ್ಕನ್ನು ಬದಿಗೆ ಸರಿಸಿ ಕೇಂದ್ರ ಸರಕಾರವೇ ನಿರ್ಧರಿಸುವ ವೇತನ, ಕೆಲಸ, ಕಾಮಗಾರಿಗಳ ಮೂಲಕ ವಲಸೆಯನ್ನು ಹೆಚ್ಚಿಸಿ, ಕಾರ್ಮಿಕರನ್ನು ಗುತ್ತಿಗೆದಾರರಿಗೆ ಅಗ್ಗದ ಕೂಲಿಗೆ ಪೂರೈಸುವ ಈ ವಿಬಿ-ಜಿಗ್ರಾಮ್‌ಜಿ ಕಾನೂನನ್ನು ನಾವು ತಿರಸ್ಕರಿಸುತ್ತೇವೆʼ ಎಂದರು.

ʼಕೇಂದ್ರ ಸರ್ಕಾರ ಈಗಾಗಲೇ ಆದೇಶಿಸಿದ ಜನವರಿ 26ರ ಗ್ರಾಮ ಸಭೆಯಲ್ಲಿ ನಾವು ಹೊಸ ಕಾನೂನನ್ನು ವಿರೋಧಿಸಿ ಸರ್ವಾನುಮತದಿಂದ ಠರಾವು ಪಾಸು ಮಾಡಿಸಿದ್ದೇವೆ. ಬೇಡಿಕೆ ಆಧಾರಿತ, ಸಾರ್ವತ್ರಿಕ, ಉದ್ಯೋಗದ ಹಕ್ಕಿನ ಮನರೇಗಾ ಕಾನೂನನ್ನು ಮರುಸ್ಥಾಪಿಸಬೇಕು. ವಿಬಿ-ಜಿಗ್ರಾಮ್ ಜಿ ಕಾನೂನನ್ನು ಹಿಂಪಡೆಯಬೇಕೆಂದು ಗಾಂಧಿ ಹುತಾತ್ಮರಾದ ದಿನದಂದು ಗಾಂಧಿ ಆಶಯವನ್ನು ಎತ್ತಿ ಹಿಡಿಯಲೇಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಮೊಯಿದ್ ಖಾನ್ ಖುಲಾಸೆ; ಮೋದಿಯುಗದ ನಿರಾಧಾರ ಮುಸ್ಲಿಂ ದ್ವೇಷಕ್ಕೆ ಮತ್ತೊಂದು ಪುರಾವೆ

ಪ್ರತಿಭಟನೆಯಲ್ಲಿ ಮನರೇಗಾ ಉಳಿಸಿ ಆಂದೋಲದ ಪ್ರಮುಖರಾದ ಸಪ್ನಾದೀಪ, ಗೀತಾ ಡಿಗಾರೆ, ರಾಜಕುಮಾರ ಡಿಗಾರೆ, ಸುಶೀಲಾಬಾಯಿ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಬೀದರ್‌ ಜಿಲ್ಲೆಯಲ್ಲಿ ಅಕ್ಟೋಬರ್ 1 ರಿಂದ ಆಮ್‌ ಆದ್ಮಿ ಪಕ್ಷದಿಂದ ಸದಸ್ಯತ್ವ...

ಹುಲಸೂರ ತಾಲೂಕು ʼಬರʼ ಘೋಷಣೆಗೆ ಸೆ.27ರ ಗಡುವು: 6 ದಿನಗಳ ಧರಣಿ ಕೊನೆಗೊಳಿಸಿದ ರೈತರು

ಹುಲಸೂರ ತಾಲೂಕು ಬರ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ...