ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

Date:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ (THO) ಡಾ.ಅಶೋಕ ಮೈಲಾರೆ ಅವರ ಅಮಾನತು ಆದೇಶಗಳನ್ನು ಕೂಡಲೇ ಹಿಂಪಡೆದು, ಅವರನ್ನು ಕರ್ತವ್ಯಕ್ಕೆ ಮರು ನಿಯೋಜಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ಆಗ್ರಹಿಸಿವೆ.

- Advertisement -

ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ ಸಿಇಒ ಗಿತ್ತೆ ಮಾಧವ್‌ ವಿಠಲರಾವ್‌ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಡಿಎಚ್‌ಒ ಡಾ.ಧ್ಯಾನೇಶ್ವರ ನಿರಗುಡೆ ಅವರು ಪ್ರಾಮಾಣಿಕ, ದಕ್ಷ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದು, ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವೈಖರಿ ಹಾಗೂ ಇಲಾಖೆಗೆ ಸಲ್ಲಿಸುತ್ತಿರುವ ಸೇವೆಯನ್ನು ಜಿಲ್ಲೆಯ ಅಧಿಕಾರಿಗಳು ,ನೌಕರರು ಗೌರವಿಸುತ್ತಾರೆ ಎಂದು ಸಂಘ ತಿಳಿಸಿದೆ.

ಸೆ. 16ರಂದು ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಗಣ್ಯರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದ ಲೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂಬುದು ಪತ್ರಿಕಾ ವರದಿಗಳಿಂದ ತಿಳಿದುಬಂದಿದೆ. ಬ್ಯಾನರ್‌ಗೆ ಸಂಬಂಧಿಸಿದ ಲೋಪಕ್ಕಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಅಮಾನತಿನಂತಹ ಕಠಿಣ ಕ್ರಮ ಕೈಗೊಂಡಿರುವುದು ಅಧಿಕಾರಿಗಳು, ನೌಕರರಲ್ಲಿ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ” ಎಂದು ಸಂಘದ ಪದಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

IMG 20260919 WA0203

ಈ ಪ್ರಕರಣದ ವಾಸ್ತವಾಂಶಗಳನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಿ, ಅಮಾನತು ಆದೇಶಗಳನ್ನು ಹಿಂಪಡೆದು ಅಧಿಕಾರಿಗಳನ್ನು ಕರ್ತವ್ಯಕ್ಕೆ ಮರು ನಿಯೋಜಿಸಲು ಸಕ್ಷಮ ಪ್ರಾಧಿಕಾರ ಹಾಗೂ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕರ್ತವ್ಯನಿಷ್ಠ ಅಧಿಕಾರಿಗಳು ಹಾಗೂ ನೌಕರರಿಗೆ ಅನಗತ್ಯ ಒತ್ತಡ ಅಥವಾ ಅನ್ಯಾಯವಾಗದಂತೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ : ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೋಮಶೇಖರ ಚಿದ್ರಿ, ಕಾರ್ಯದರ್ಶಿ ಪ್ರಭು ತುಗಾವೆ, ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ, ಸುನೀಲ ಕಸ್ತೂರೆ, ಸತ್ತಾರ ಪಟೇಲ್, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶಂಕ್ರೇಪ್ಪ ಬೊಮ್ಮಾ, ಕಾರ್ಯದರ್ಶಿ ಡಾ.ಸಂದೀಪ ಘೊಡೆ, ಖಜಾಂಚಿ ಡಾ.ಶಾಂತಲಿಂಗ ಪಾಟೀಲ್, ಡಾ.ಕಿರಣ ಪಾಟೀಲ್, ಡಾ. ದೀಪಾ ಖಂಡ್ರೆ, ಡಾ.ಅನೀಲ ಏಕ್ಲೂರೆ, ಡಾ.ಸೋಹಿಲ್, ಡಾ.ರಾಜಶೇಖರ್ ಪಾಟೀಲ್, ಡಾ.ಸಂಗಾರೆಡ್ಡಿ, ಡಾ. ಗಾಯತ್ರಿ ವಿಜಯಕುಮಾರ, ಡಾ. ಅನೀಲ್ ಗಡ್ಡೆ, ನಿತೀನ್ ಬಿರಾದಾರ, ಡಾ. ರವಿ ಕಲಶೆಟ್ಟಿ, ಡಾ. ಶಶಿ ಭೂರೆ, ಡಾ. ಶೇಷಾಂಗ, ಡಾ. ಅಶೋಕ ಮೈಲಾರೆ, ಡಾ. ಯುವರಾಜ, ಡಾ.ಅಜಯ, ಡಾ. ಶಿವಕುಮಾರ ಸಿದ್ದೇಶ್ವರ ಹಾಗೂ ಡಾ. ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...