ಬೀದರ್‌ | ಒಳ ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಲಗೈ ಸಮುದಾಯಗಳ ಬೃಹತ್‌ ಪ್ರತಿಭಟನೆ

Date:

ಒಳ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ಬೀದರ್‌ ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

- Advertisement -

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಸಮುದಾಯದವರು ಬಾಬಾ ಸಾಹೇಬ್‌ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದರು. ಅಲ್ಲಿಂದ ಭಗತ್‌ ಸಿಂಗ್‌ ವೃತ್ತ ಮಾರ್ಗವಾಗಿ ಮಹಾತ್ಮ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿದರು. ಬಸವೇಶ್ವರ ವೃತ್ತದಿಂದ ಪುನಃ ಭಗತ್‌ ಸಿಂಗ್‌ ವೃತ್ತ, ತಹಸೀಲ್‌ ಕಚೇರಿ, ಜಿಲ್ಲಾ ಕೋರ್ಟ್‌, ಛತ್ರಪತಿ ಶಿವಾಜಿ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಸಮಾವೇಶಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪ್ರತಿಭಟನೆಯಲ್ಲಿ ಭಾಗವಹಿಸಿದವರು ಕೈಯಲ್ಲಿ‌ ನೀಲಿಧ್ವಜ ಹಿಡಿದು, ಕೊರಳಲ್ಲಿ ನೀಲಿ ಬಣ್ಣದ ಶಾಲು ಧರಿಸಿದರು. ಮೆರವಣಿಗೆಯುದ್ದಕ್ಕೂ ನ್ಯಾ.ನಾಗಮೋಹನದಾದ್‌ ವರದಿಯಲ್ಲಿ ಬಲಗೈ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂಬ ಘೋಷಣೆಗಳು ಮೊಳಗಿದವು.

ಅಂಬೇಡ್ಡರ್‌ ವೃತ್ತದಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಸಮುದಾಯ ಪ್ರಮುಖರು ಮಾತನಾಡಿ ಒಳ ಮೀಸಲಾತಿ ಅನ್ಯಾಯವನ್ನು ಖಂಡಿಸಿದರು. ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

WhatsApp Image 2026 03 17 at 5.19.48 PM 1

ಬಲಗೈ ಸಮುದಾಯದ ಮುಖಂಡರು ಮಾತನಾಡಿ, ʼ2025ರ ಆ.4ರಂದು ನ್ಯಾ.ನಾಗಮೋಹನ ದಾಸ್ ಅವರು ಸರ್ಕಾರಕ್ಕೆ ಸಲ್ಲಿಸಿರುವ ಒಳ ಮೀಸಲಾತಿ ವರದಿ ಅವೈಜ್ಞಾನಿಕ ಹಾಗೂ ದೋಷಪೂರಿತವಾಗಿದ್ದು, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸಲ್ಲಿಸಲಾಗಿದೆ. ಈ ವರದಿಯ ಆಧಾರದ ಮೇಲೆ ಸರ್ಕಾರ ಕೈಗೊಂಡಿರುವ ಕ್ರಮಗಳಿಂದ ಬಲಗೈ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆʼ ಎಂದು ಆರೋಪಿಸಿದರು.

ಜೇಷ್ಠತಾ ಸಂರಕ್ಷಣಾ ಕಾಯ್ದೆ ಜಾರಿಯಲ್ಲಿದ್ದರೂ ವಿವಿಧ ಇಲಾಖೆಗಳು ಬಡ್ತಿ ಮೀಸಲಾತಿಯಲ್ಲಿ ವಂಚನೆಯಾಗುತ್ತಿದೆ. ಒಳ ಮೀಸಲಾತಿ ಹಾಗೂ ರೋಸ್ಟರ್ ಬಿಂದುಗಳ ನಿಗದಿಯಲ್ಲಿ ಅನೇಕ ಗೊಂದಲಗಳಿದ್ದು, ಅವುಗಳನ್ನು ತಕ್ಷಣ ಸರಿಪಡಿಸಬೇಕು. ಸರ್ಕಾರದ ವಿವಿಧ ಆದೇಶಗಳಲ್ಲಿ ಮೀಸಲಾತಿ ರೋಸ್ಟರ್ ಬಿಂದುಗಳನ್ನು ಅವೈಜ್ಞಾನಿಕವಾಗಿ ನಿಗದಿಪಡಿಸಿರುವುದನ್ನು ಪರಿಷ್ಕರಿಸಿ, ಹಳೆಯ ನಿಯಮಾವಳಿಗಳ ಆಧಾರದ ಮೇಲೆ ಹೊಸ ರೋಸ್ಟರ್ ವ್ಯವಸ್ಥೆ ಜಾರಿಗೆ ತರಬೇಕು. ಜೇಷ್ಠತಾ ಸಂರಕ್ಷಣಾ ಕಾಯ್ದೆ ಜಾರಿಗೊಳಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕುʼ ಎಂದು ದೂರಿದರು.

ʼಬ್ಯಾಕ್‌ಲಾಗ್ ಹುದ್ದೆಗಳನ್ನು ಒಂದೇ ಬಾರಿ ಮುಂಬಡ್ತಿ ಮೂಲಕ ಭರ್ತಿ ಮಾಡುವುದು, ತಪ್ಪು ಸ್ಪಷ್ಟೀಕರಣ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಹಾಗೂ ವಿವಿಧ ಇಲಾಖೆಗಳ ಗೊಂದಲಮಯ ಅಭಿಪ್ರಾಯಗಳನ್ನು ಹಿಂಪಡೆಯಬೇಕು. ಒಳ ಮೀಸಲಾತಿ ಗೊಂದಲಗಳು ಪರಿಹಾರವಾಗುವ ತನಕ ಪ್ರಸ್ತುತ ಮೀಸಲಾತಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಮುಂದುವರಿಬೇಕುʼ ಎಂದು ಒತ್ತಾಯಿಸಿದರು.

ಹಕ್ಕೊತ್ತಾಯಗಳು :

ʼಒಳ ಮೀಸಲಾತಿ ವರದಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವರೆಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಜಾರಿಯಲ್ಲಿರುವ ಕ್ರಮಗಳಿಗೆ ತಕ್ಷಣ ತಡೆಯಾಜ್ಞೆ ನೀಡಬೇಕು. ಹೊಸ ಜಾತಿ ಪ್ರಮಾಣ ಪತ್ರ ವಿತರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಹಳೆಯ ಪ್ರಮಾಣ ಪತ್ರವನ್ನೇ ಮುಂದುವರಿಸಬೇಕು. ಒಳಮೀಸಲಾತಿಗೆ ಅನ್ವಯಿಸಿರುವ ರೋಸ್ಟರ್ ಬಿಂದುಗಳನ್ನು ಪರಿಷ್ಕರಿಸಿ ಸರಿಪಡಿಸಬೇಕು. ಗೊಂದಲಗಳು ನಿವಾರಣೆಯಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆಯನ್ನೇ ಅನುಸರಿಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಲಗೈ ಸಮುದಾಯಗಳಿಗೆ ಅನ್ಯಾಯವಾಗದಂತೆ ತೀರ್ಮಾನ ಕೈಗೊಳ್ಳಬೇಕುʼ ಎಂದು ಮನವಿಯಲ್ಲಿ ತಿಳಿಸಲಾಗಿದೆ.

WhatsApp Image 2026 03 17 at 5.19.49 PM

ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಮಹೇಶ ಗೋರನಾಳಕರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಕಾಶ ರಾವಣ, ಪ್ರದೀಪ ನಾಟೇಕರ್, ಪವನ ಮಿಠಾರೆ, ರಾಹುಲ್ ಡಾಂಗೆ, ಭೀಮರಾವ ಮಾಲಗತ್ತಿ, ಸೂರ್ಯಕಾಂತ ಸಾದುರೆ, ವಿನೋದ ಬಂದಗೆ, ಸಂಜುಕುಮಾರ ಸಾಗರ ಹಾಗೂ ಅರುಣ ಪಟೇಲ್, ಸಮಿತಿಯ ಸಲಹೆಗಾರರಾದ ಮಾರುತಿ ಬೌದ್ಧೆ, ಬಾಬುರಾವ ಪಾಸ್ವಾನ್, ಅನೀಲಕುಮಾರ ಬೆಲ್ದಾರ್, ಶ್ರೀಪತರಾವ ದೀನೆ, ಕಲ್ಯಾಣರಾವ ಭೋಸ್ಲೆ, ರಾಜಕುಮಾರ ಮೂಲಭಾರತಿ, ಶಿವಕುಮಾರ ನೀಲಿಕಟ್ಟಿ, ವಿಠಲದಾಸ ಪ್ಯಾಗೆ, ಕಪಿಲ ಗೊಡಬೊಲೆ, ವಿನೋದ ಅಪ್ಪೆ, ಬಾಬುರಾವ ಟೈಗರ್, ವಿನಯಕುಮಾರ ಮಾಳಗೆ, ರಾಜಕುಮಾರ ಸಿಂಧೆ, ಪ್ರವೀಣ ಕರಂಜಿ, ರಾಜಕುಮಾರ ಮೋರೆ, ಪ್ರಕಾಶ ಸುಲ್ತಾನೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಪ್ರಮುಖರಾದ ಪ್ರಮೋದ ಶಿಂದೆ, ಉದಯ ನಾಯಕ, ಸಂದೀಪ್ ಕಾಂಟೆ, ಮುಖೇಶ ರಾಯ್, ಲಕ್ಷ್ಮಣ ಕಾಂಬಳೆ, ಸಂಜುಕುಮಾರ ಮೇತ್ರೆ, ಸುನೀಲ ಸಂಗಮ್, ಗಂಜೇಂದ್ರ ಕನಕಟಕರ್, ಮಲ್ಲಿಕಾರ್ಜುನ ಮಹೇಂದ್ರಕುಮಾರ, ಸಂಜುಕುಮಾರ ಭಾವಿಕಟ್ಟಿ, ಮಲ್ಲಿಕಾರ್ಜುನ ಮಾಲೆ, ಮಲ್ಲಿಕಾರ್ಜುನ ಮೊಳಕೆರೆ, ಪ್ರೇಮ ಬುಡಕೆ, ಗಂಗಮ್ಮಾ ಫುಲೆ, ಸುಧಾಮಣಿ ಗುಪ್ತಾ, ರಂಜೀತಾ ಜೈನೋರ್ ಹಾಗೂ ಉಷಾಬಾಯಿ ಬನ್ಸೂಡೆ ಸೇರಿದಂತೆ ಜಿಲ್ಲೆಯ ಅಪಾರ ಸಂಖ್ಯೆಯ ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನೆಟ್‌ವರ್ಕ್ ಸಮಸ್ಯೆ : ಮೊಬೈಲ್‌ ಕರೆ, ರೇಷನ್‌ ಕಾರ್ಡ್ ಬಯೋಮೆಟ್ರಿಕ್‌ಗಾಗಿ ಗ್ರಾಮಸ್ಥರ ಪರದಾಟ!

ದೇಶ 5ಜಿ ಅಂತರ್ಜಾಲ ಸೇವೆ, ಎಐ ತಂತ್ರಜ್ಞಾನದಂತಹ ಅತ್ಯಾಧುನಿಕ ಕಾಲದಲ್ಲಿದೆ. ಆದರೆ,...

ಬೀದರ್‌ ವಿವಿ ಪ್ರಥಮ ಘಟಿಕೋತ್ಸವ : 20 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಇಬ್ಬರಿಗೆ ಗೌರವ ಡಾಕ್ಟರೇಟ್

ಭಾಲ್ಕಿ ತಾಲೂಕಿನ ಹಾಲಹಳ್ಳಿ(ಕೆ) ಸಮೀಪದ ಬೀದರ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಸಮಾರಂಭವು...

ಬೀದರ್‌ | ಮನ್ನಳ್ಳಿಯಲ್ಲಿ ಜನ ಸ್ಪಂದನ: 193 ದೂರುಗಳು ಸ್ಥಳದಲ್ಲೇ ಇತ್ಯರ್ಥ

ಜನರ ಸಮಸ್ಯೆಗಳನ್ನು ಅವರ ಬಳಿಯೇ ಆಲಿಸಿ, ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ತ್ವರಿತವಾಗಿ...

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು...