ಬೀದರ್ ಜಿಲ್ಲೆಯ ರೈತರು ಹಾಗೂ ಜಾನುವಾರು ಮಾಲೀಕರಿಗಾಗಿ ‘ಆಧುನಿಕ ಹೈನುಗಾರಿಕೆ’ ಕುರಿತು ಎರಡು ದಿನಗಳ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೆಪ್ಟೆಂಬರ್ 22 ಮತ್ತು 23ರಂದು ಜನವಾಡ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಹಿಂಭಾಗದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ತರಬೇತಿ ನಡೆಯಲಿದೆ ಎಂದು ಬೀದರ್ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತರಬೇತಿಗೆ ಹಾಜರಾಗುವವರು ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಎರಡು ಭಾವಚಿತ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದರೆ ಜಾತಿ ಪ್ರಮಾಣಪತ್ರ ಸಲ್ಲಿಸಬೇಕು. ಆಸಕ್ತರು ತಮ್ಮ ಹೆಸರು ಹಾಗೂ ಮೊಬೈಲ್ ಸಂಖ್ಯೆಯ (ವಾಟ್ಸ್ಆ್ಯಪ್) ಮೂಲಕ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು.
40 ರೈತರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು. ಈ ಕೇಂದ್ರದಲ್ಲಿ ಈಗಾಗಲೇ ತರಬೇತಿ ಪಡೆದವರಿಗೆ ಮತ್ತೊಮ್ಮೆ ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9448222690 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : ಬೀದರ್ | ಗ್ರಾಮೀಣ ಆಶ್ರಯ ಯೋಜನೆಯಡಿ ನಿವೇಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ





