ಬೀದರ್ ನಗರದ ಗುಂಪಾ ಸಮೀಪದ ಕಾರ್ಮಿಕರ ತಂಗುದಾಣದಲ್ಲಿ ಆದಿತ್ಯ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ವಿಶ್ವ ಕಾರ್ಮಿಕ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಾರ್ವಜನಿಕ ಗ್ರಂಥಾಲಯದ ನಿವೃತ್ತ ಉಪನಿರ್ದೇಶಕ ಡಿ.ಎಚ್ ಕೇಸರಿ ಮಾತನಾಡಿ, ʼಕಾರ್ಮಿಕರ ಪರಿಶ್ರಮವು ಸಮಾಜದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕಾರ್ಮಿಕರ ಆಸೆಗಳು, ಅವರ ಜೀವನದ ಸಂಕಷ್ಟಗಳು ಹಾಗೂ ಆರ್ಥಿಕ ಮತ್ತು ಸಾಮಾಜಿಕ ಸವಾಲುಗಳ ಬಗ್ಗೆ ವಿವರವಾಗಿ ಚರ್ಚಿಸಿ, ಅವರಿಗೆ ಅಗತ್ಯವಾದ ನೆರವು ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆʼ ಎಂದು ಹೇಳಿದರು.
ನಿವೃತ್ತ ಪ್ರಾಚಾರ್ಯರೂ ಆದ ಆದಿತ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ದೇವಿದಾಸ ತುಮಕುಂಟೆ ಮಾತನಾಡಿ, ʼಕಾರ್ಮಿಕ ವರ್ಗ ನಿಷ್ಠೆಯಿಂದ ದುಡಿಯುತ್ತದೆ. ಇಂದಿಗೂ ಅವರ ಸಿಗಬೇಕಾದ ಅನೇಕ ಸೌಲಭ್ಯಗಳು ದೊರೆಯುತ್ತಿಲ್ಲ. ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕಾರ್ಮಿಕರ ಕಲ್ಯಾಣಕ್ಕಾಗಿ ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಭದ್ರತೆ ಹಾಗೂ ಹಕ್ಕುಗಳ, ಯೋಜನೆಗಳನ್ನು ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಮಿಕರು ಕೆಲಸ ಸಮಯದಲ್ಲಿ ಆಗುವ ತೊಂದರೆಗಳ ಬಗ್ಗೆ ತಿಳಿದುಕೊಳ್ಳಲಾಯಿತು. ಎಲ್ಲಾ ಕಾರ್ಮಿಕರಿಗೆ ಉಪಹಾರ ವಿತರಣೆ ಮಾಡಲಾಯಿತು.
ಇದನ್ನೂ ಓದಿ : ಭಾಲ್ಕಿ | ಜ್ಞಾನ, ಕರುಣೆ, ವಿವೇಕದ ಸಾಕಾರಮೂರ್ತಿ ಬುದ್ಧ : ಗುರುಬಸವ ಪಟ್ಟದ್ದೇವರು
ಈ ಸಂದರ್ಭದಲ್ಲಿ ಪ್ರಮುಖರಾದ ಮಾರುತಿ ವಾಗಮಾರೆ, ವಾಮನರಾವ್, ಅನಿತಾ, ತುಳಸಿರಾಮ, ತ್ರಿವೇಣಿ, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.




