ಬೀದರ್‌ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಜೋರು ಮಳೆ

Date:

ಬೀದರ್‌ ಜಿಲ್ಲೆಯ ಹಲವಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಬಿರುಸಿನ ಮಳೆ ಸುರಿಯಿತು.

- Advertisement -

ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣ ಇತ್ತು. ಸಂಜೆ 7 ಗಂಟೆ ನಂತರ ಎಲ್ಲೆಡೆ ಮಳೆ ತಣ್ಣನೆಯ ಗಾಳಿ ಬೀಸಿತು. ಬಳಿಕ ಗುಡುಗು, ಮಿಂಚಿನೊಂದಿಗೆ ಆಲಿಕಲ್ಲು ಸಹಿತ ಮಳೆ ಆರ್ಭಟ ಜೋರಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಬೀದರ್‌ ನಗರದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬೆಂಬಿಡದೆ ಮಳೆಯಾಗಿದೆ, ಇನ್ನು ಚಿಟಗುಪ್ಪ, ಹುಮನಾಬಾದ್‌, ಭಾಲ್ಕಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿರುವ ಬಗ್ಗೆ ತಿಳಿದುಬಂದಿದೆ.

ಭಾನುವಾರ ಸಂಜೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿತು, ಸೋಮವಾರ ಕೆಲವೆಡೆ ಅಲ್ಪ ಪ್ರಮಾಣದಲ್ಲಿ ಮಳೆ ಸುರಿಯಿತು. ಮೂರನೇ ದಿನ ಮಂಗಳವಾರ ಆಲಿಕಲ್ಲು ಸಹಿತ ಮಳೆ ಜೋರಾಗಿದೆ. ಯುಗಾದಿ ಬಳಿಕ ಆರಂಭವಾಗುತ್ತಿದ್ದ ಮಳೆ ಈ ಬಾರಿ ಹಬ್ಬಕ್ಕೂ ಮುನ್ನವೇ ಬರುತ್ತಿದೆ. ಅದು ಕೂಡ ಆಲಿಕಲ್ಲು ಸುರಿಸಿ ಅಬ್ಬರಿಸುತ್ತುದೆ.

ಮುಂಗಾರು ಬೆಳೆಗಳಾದ ಬಿಳಿ ಜೋಳ, ಕುಸುಬೆ, ಕಡಲೆ ಸೇರಿದಂತೆ ಹಲವು ತೋಟಗಾರಿಕೆ ಬೆಳೆಗಳಿವೆ. ಕಟಾವಿನ ಹಂತದಲ್ಲಿರುವ ಬೆಳೆ, ಕಲ್ಲಂಗಡಿ, ಮಾವಿನ ಮರ ಇತರೆ ಬೆಳೆಗಳು ಆಲಿಕಲ್ಲು ಮಳೆಯಿಂದ ಹಾನಿಯುಂಟಾಗುವ ಸಾಧ್ಯತೆ ಇದೆ. ಇದರಿಂದ ರೈತಾಪಿ ವರ್ಗ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಭಾಲ್ಕಿಯಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆ

ಇದನ್ನೂ ಓದಿ : ಬೀದರ್‌ | ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : 94 ಪರೀಕ್ಷಾ ಕೇಂದ್ರ; ವೆಬ್‌ಕಾಸ್ಟಿಂಗ್‌ ಕಣ್ಗಾವಲು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...

SIR ಪ್ರಕ್ರಿಯೆಯಲ್ಲಿ ಗಂಭೀರ ಲೋಪ; ಚುನಾವಣಾ ಆಯೋಗಕ್ಕೆ ಬಿ.ಕೆ. ಹರಿಪ್ರಸಾದ್ ಪತ್ರ

ASDDO ಅಂಕಿಅಂಶಗಳಲ್ಲಿ ಹೊಂದಾಣಿಕೆ ಇಲ್ಲ, 44 ಲಕ್ಷ ಮತದಾರರ ಮ್ಯಾಪಿಂಗ್ ಸಮಸ್ಯೆ,...

ಕರಾವಳಿ-ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟದಲ್ಲಿ ಕರಾವಳಿ, ಮಲೆನಾಡು ಕರ್ನಾಟಕ ಪ್ರವಾಸೋದ್ಯಮ...