ಬೀದರ್‌ | ಜೆಜೆಎಂ ಅನುದಾನ ದುರ್ಬಳಕೆ ಆರೋಪ; ತನಿಖೆ ಬಿಎಸ್‌ಪಿ ಆಗ್ರಹ

Date:

ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು ಘಟಕ ಆಗ್ರಹಿಸಿದೆ.

- Advertisement -

ಬಿಎಸ್‌ಪಿ ತಾಲೂಕು ಘಟಕದ ಪದಾಧಿಕಾರಿಗಳು ಬಸವಕಲ್ಯಾಣ ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ತಾ.ಪಂ. ಇಒ ಮಹಾದೇವ ಬಾಬುಳಗಿ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ತಾಲೂಕಿನ ಮಂಗಳೂರು, ಶಿವರಾಮ ತಾಂಡಾ, ಖೇರ್ಡಾ(ಬಿ), ಹಿರೇನಾಗಾಂವ, ನಾರಾಯಣಪುರ, ಕಿಟ್ಟಾ, ಗುತ್ತಿ ಗ್ರಾಮಗಳಲ್ಲಿನ ಜೆಜೆಎಂ ಕಾಮಗಾರಿ ಕುಂಟುತ್ತ ಸಾಗಿದೆ. ಆದ್ದರಿಂದ ಸಂಬಂಧಿತ ಜೆಇ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಕೆಲಸ ಪೂರ್ಣಗೊಳ್ಳದಿದ್ದರೂ ಈ ಕಾರ್ಯಕ್ಕೆ ಕೆಲ ಪಂಚಾಯಿತಿ ಅಧಿಕಾರಿಗಳು ಮತ್ತು ಸದಸ್ಯರು ಸಹಕಾರ ನೀಡಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

“ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಕಿಟ್ಟಾ ಗ್ರಾಮದ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ, ಕಂಪೌಂಡ್ ಅಡುಗೆ ಕೋಣೆ ಗಾರ್ಡನ್‌ ನಿರ್ಮಿಸಬೇಕು. ತಾಲೂಕು ಪಂಚಾಯತ್‌ ಕಚೇರಿಯಲ್ಲಿ ಶೌಚಾಲಯ ನಿರ್ಮಿಸುವಂತೆ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೆೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಶಂಕರ ಫುಲೆ, ಜಿಲ್ಲಾ ಉಪಾಧ್ಯಕ್ಷ ಅಶೋಕ ಮಂಠಾಳಕರ್, ಮಹಾದೇವ ಗಾಯಕವಾಡ, ದತ್ತು ಸುಂಠಾಣೆ, ಚೇತನ ಕಾಡೆ, ವಿಷ್ಣುಕಾಂತ ಸೂರ್ಯವಂಶಿ, ಅಶೋಕ ಶಿಂಧೆ, ರೋಷನ ಜವಾಹರ, ಸಚಿನ್‌ ಕಾಂಬಳೆ, ಸಂದೀಪ ಮತ್ತಿತರರು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...