79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಆನಂತರ ಪೊಲೀಸ್, ಅರಣ್ಯ, ಅಗ್ನಿ ಶಾಮಕ ಇಲಾಖೆ ಸೇರಿದಂತೆ ವಿವಿಧ 10 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಬಳಿಕ ಮಾತನಾಡಿದ ಸಚಿವ ಈಶ್ವರ ಬಿ.ಖಂಡ್ರೆ, “ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ರಜಾಕಾರರ ಮತ್ತು ಹೈದರಾಬಾದ್ ನಿಜಾಮರ ದಬ್ಬಾಳಿಕಯಿಂದ 1948 ಸೆ.17 ರಂದು ಸ್ವಾತಂತ್ರ್ಯ ದೊರೆಯಿತು. ಕಲ್ಯಾಣ ಕರ್ನಾಟಕ ಉತ್ಸವ ಕೂಡ ನಮ್ಮ ರಾಷ್ಟ್ರೀಯ ಹಬ್ಬವಾಗಿದೆ” ಎಂದರು.

“ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆ ನಂಬರ್ ಒನ್ ಮಾಡುವ ಗುರಿ ಇದೆ” ಎಂದು ಹೇಳಿದರು.
This video cannot be played in your browser. Open the video directly
ಇದನ್ನೂ ಓದಿ : ಬೀದರ್ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಪಾಟೀಲ್, ಎಸ್ಪಿ ಪ್ರದೀಪ್ ಗುಂಟಿ, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ ಸೇರಿದಂತೆ ಇತರರಿದ್ದರು.






