ಬೀದರ್‌ | ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ದೇಶಕ್ಕೆ ಅಪಾಯ: ಸಾತಿ ಸುಂದರೇಶ

Date:

Advertisements

ದೇಶದ ಜನರನ್ನು ಧರ್ಮದ ಹೆಸರಿನಲ್ಲಿ ಸಮೂಹಸನ್ನಿಗೆ ಬಳಸಿಕೊಂಡು ಭಾವನಾತ್ಮಕ ರಾಜಕಾರಣ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಆರ್‌ಎಸ್‌ಎಸ್ ಗುಟ್ಟು ನೀತಿಯನ್ನು ಕಮ್ಯೂನಿಸ್ಟ್‌ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ ಹೇಳಿದರು.

ಬೀದರ್‌ ನಗರದ ಸಿಪಿಐ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಂಡಲದ ಸಭೆಯಲ್ಲಿ ಭಾಗವಹಿಸಿ ಮಾತನಾಡಿ “ಜನಸಾಮಾನ್ಯರ ಅಸಂಖ್ಯಾತ ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ ಕೇವಲ ಧಾರ್ಮಿಕ ವಿಷಯಗಳಿಂದ ಭಾವನಾತ್ಮಕ ರಾಜಕಾರಣವನ್ನು ವಿರೋಧಿಸಿ ಜನರ ಬದುಕು ಕಟ್ಟುವ ರಾಜಕಾರಣ ಮುಂದುವರೆಸಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ನಮ್ಮ ಹೋರಾಟ ನಡೆಯುತ್ತಿದೆ” ಎಂದರು.

“ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಪ್ರಧಾನಿ ಮೋದಿ ನೇತ್ರತ್ವದ ಸರ್ಕಾರದ ನೀತಿ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿದೆ. ಗಣರಾಜ್ಯ ದೇಶವನ್ನು ರಾಮರಾಜ್ಯ ಮಾಡಿದ್ದೇವೆ ಎಂದು ಹೇಳಿಕೊಂಡು, ರಾಮರಾಜ್ಯ ಬಂದ ಮೇಲೆ ದೇಶದಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತೇವೆ ಎನ್ನುವ ನಿಟ್ಟಿನಲ್ಲಿ ಭಾವನೆಗಳನ್ನು ಹೇರುವ ಕೇಂದ್ರದ ವಿರುದ್ಧ ನಾವು ಅನೇಕ ಕಾರ್ಯಕ್ರಮಗಳು ನಡೆಸುತ್ತಿದ್ದೇವೆ” ಎಂದರು.

Advertisements

ʼಇಂಡಿಯಾʼ ಮೈತ್ರಿಕೂಟಕ್ಕೆ ಸಿಪಿಐ ಬೆಂಬಲ :

“ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕೆಂಬ ಅಪೇಕ್ಷೆಯಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ದೇಶದ ಜಾತ್ಯಾತೀತ, ಪ್ರಗತಿಪರ ಮತ್ತು ಎಡಪಕ್ಷಗಳು ಒಗ್ಗೂಡಿ ರಚಿಸಿದ ಇಂಡಿಯಾ ಮೈತ್ರಿಕೂಟದ ಭಾಗವಾಗಿ ನಾವಿದ್ದೇವೆ. ರಾಜ್ಯದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾಗಿ ನಾವು ಸಕ್ರಿಯವಾಗಿ ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಮೌಲ್ಯಗಳಿಗೆ ಬೆಲೆ ಕೊಡುವ ಸರ್ಕಾರವನ್ನು ಕೇಂದ್ರದಲ್ಲಿ ರಚಿಸಲು ಸಂಪೂರ್ಣವಾಗಿ ರಾಜಕೀಯ ಹೋರಾಟಕ್ಕೆ ನಾವು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ನೋಟಿಸ್ ಬಂದ ಮೇಲೆ ಕಾರ್ಖಾನೆ ಬಂದ್ ಮಾಡಬೇಕು, ಇಲ್ಲದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲು: ಸಚಿವ ಈಶ್ವರ ಖಂಡ್ರೆ

“ಮಾಜಿ ಸಿಎಂ ಜಗದೀಶ ಶೆಟ್ಟರ್‌ ಕಾಂಗ್ರೇಸ್‌ ತೊರೆದು ಪುನಃ ಬಿಜೆಪಿ ಸೇರ್ಪಡೆಯಾಗಿದ್ದು ನೋಡಿದರೆ ಪ್ರಸಕ್ತ ರಾಜಕೀಯದಲ್ಲಿ ಯಾವುದೇ ರಾಜಕಾರಣಿಗಳಿಗೂ ಪಕ್ಷ ನಿಷ್ಠೆ ಮತ್ತು ಸಿದ್ಧಾಂತದ ವಿಚಾರಕ್ಕೆ ರಾಜಕಾರಣ ಮಾಡುವುದು ಮರೆಯಾಗಿದೆ. ರಾಜಕಾರಣವನ್ನು ಸಂಪೂರ್ಣವಾಗಿ ಕಲುಷಿತ ಮಾಡುತ್ತಿರುವ ರಾಜಕೀಯ ನಾಯಕರನ್ನು ಜನರೇ ಬಹಿಷ್ಕರಿಸಬೇಕು” ಎಂದು ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X