ಬೀದರ್‌ | ಫೆ.24ಕ್ಕೆ ಸುಭಾಷ್‌ ಚಂದ್ರ ಬೋಸ್‌ ಪ್ರೌಢಶಾಲೆಯಲ್ಲಿ ಗುರುವಂದನಾ ಸಮಾವೇಶ

Date:

ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು ಮಲ್ಲಿಕಾರ್ಜುನ ಹಿಪ್ಪಳಗಾಂವೆ ಹೇಳಿದರು.

- Advertisement -

ಸಂತಪೂರ ಗ್ರಾಮದಲ್ಲಿ ಸುಭಾಷ್‌ ಚಂದ್ರ ಬೋಸ್‌ ಪ್ರೌಢ ಶಾಲೆಯ ‘ಹಳೆ ವಿಧ್ಯಾರ್ಥಿಗಳ ಸಮನ್ವಯ ಸಮಿತಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“1984 ರಿಂದ ಇಲ್ಲಿಯವರೆಗೂ ಸಾವಿರಾರು ವಿದ್ಯಾರ್ಥಿಗಳಿಗೆ ಬದುಕು ಕಟ್ಟಿಕೊಟ್ಟ ಶ್ರೇಯಸ್ಸು ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಗೆ ಸಲ್ಲುತ್ತದೆ. ಈ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಸುಭಾಷ್ ಚಂದ್ರ ಬೋಸ್ ಪ್ರೌಢ ಶಾಲೆಯ ಸಾವಿರಾರು ವಿದ್ಯಾರ್ಥಿಗಳು ಇಂದು ದೇಶ-ವಿದೇಶದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯ ಸಂಗತಿಯಾಗಿದೆ” ಎಂದು ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಾಳೆ ತಿಳಿಸಿದರು.

“ಕಳೆದ ನಾಲ್ಕು ದಶಕದಿಂದ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ತಮ್ಮ ವಿದ್ಯೆ ಗುರುಗಳು, ಬಾಲ್ಯದ ಗೆಳೆಯ, ಗೆಳೆತಿಯರೊಂದಿಗೆ ಮುಖಾಮುಖಿಯಾಗಿ ಬಾಲ್ಯದ ಸಂತಸದ ಕ್ಷಣಗಳನ್ನು ಮೆಲಕು ಹಾಕುವುದು ಹಾಗೂ ಸದ್ಯದ ಬದುಕಿನ ಕುರಿತು ಕುಶಲೋಪರಿಗೆ ಈ ಸಮಾವೇಶ ವೇದಿಕೆಯಾಗಲಿದೆ” ಎಂದು ನುಡಿದರು.

“ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಂತೋಷ ಪಾಟಿಲ್ ಮಾತನಾಡಿ, “ಹಳೆ ವಿದ್ಯಾರ್ಥಿಗಳ ಸಮನ್ವಯ ಸಮಿತಿಯಿಂದ ಫೆ. 24 ರಂದು ಗುರುವಂದನಾ ಹಾಗೂ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಸಮಾವೇಶವನ್ನು ಅತ್ಯಂತ ಅರ್ಥಪೂರ್ಣವಾಗಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಪೂರ್ವ ಸಿದ್ಧತೆ ನಡೆಯುತ್ತಿದ್ದು, ಸಮಿತಿ ಹಾಗೂ ಉಪ ಸಮಿತಿಗಳನ್ನು ರಚಿಸಲಾಗಿದೆ. ಅಂದು ಮುಂಜಾನೆ ಸಂತಪೂರ ಪೋಲಿಸ್ ಠಾಣೆಯಿಂದ ಆರಂಭವಾಗಿ ಬಸವೇಶ್ವರ ವೃತ್ತ, ಅನುಭವ ಮಂಟಪ ಮಾರ್ಗವಾಗಿ ಬೃಹತ್ ಮೆರವಣಿಗೆ ನಡೆಯಲಿದೆ. ನಂತರ ಶಾಲೆಯ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಖ್ಯಾತ ಶಿಕ್ಷಣ ತಜ್ಣರು, ವಿವಿಧ ಗಣ್ಯರು, ಅತಿಥಿಗಳು ಭಾಗವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸ್ಪೃಶ್ಯತೆ, ಮೌಢ್ಯ, ಜಾತೀಯತೆ ತೊಲಗಿಸಿ ಬಸವಣ್ಣನಿಗೆ ನಿಜ ಗೌರವ ಸಲ್ಲಿಸೋಣ

ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಮುಖ್ಯ ಗುರು ಮನೋಹರ್ ಬಿರಾದರ, ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ, ನಿವೃತ್ತ ಶಿಕ್ಷಕ ಶಿವರಾಜ ಜುಲಾಂಡೆ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ನಾಗೇಶ ಸ್ವಾಮಿ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...