ಬೀದರ್‌ | ರಾಜಕೀಯ ಅಧಿಕಾರಕ್ಕಾಗಿ ಸಂಘ ಪರಿವಾರ ಕೋಮುವಾದ ಬಿತ್ತುತ್ತಿದೆ: ಅಂಕುಶ್‌ ಗೋಖಲೆ

Date:

ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ ಅಂಕುಶ್ ಗೋಖಲೆ ಹೇಳಿದರು.

- Advertisement -

ಬಸವಕಲ್ಯಾಣ ಹೊರವಲಯದ ಬಿಕೆಡಿಬಿ ಸಭಾಭವನದಲ್ಲಿ ಜನರ ಧ್ವನಿ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಬೀದರ ಜಿಲ್ಲೆಯಲ್ಲಿ ಪಾಟೀಲ್, ಖಂಡ್ರೆ , ನಾಗಮಾರಪಳ್ಳಿ ಹಾಗೂ ಖೂಬಾ ಪರಿವಾರಗಳು ಜಿಲ್ಲೆಯ ಎಲ್ಲಾ ರೀತಿಯ ರಾಜಕೀಯ ಅಧಿಕಾರ ತಮ್ಮ ಹಿಡಿತದಲ್ಲಿಟ್ಟುಕೊಂಡು ಜಿಲ್ಲೆಯನ್ನು ಲೂಟಿ ಹೊಡೆಯುತ್ತಿದ್ದಾರೆ. ತಮ್ಮ ಕಟುಂಬದ ಸದಸ್ಯರಿಗೆ ರಾಜಕೀಯವಾಗಿ ಬೆಳೆಯಲು ಜಿಲ್ಲೆಯ ಬಹುಜನರಿಗೆ ಗುಲಾಮರಂತೆ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ದೇಶದ ಸಂಘ ಪರಿವಾರದ ವಿರುದ್ಧ ಮತ್ತು ಜಿಲ್ಲೆಯ ಪರಿವಾರ ಸಂಘದ ವಿರುದ್ಧ ನಾವು ಹೋರಾಡಬೇಕಾಗಿದೆ. ಜನರ ಧ್ವನಿ ಸಂಘಟನೆ ಮೂಲಕ ಜಿಲ್ಲೆಯ ಪ್ರತಿ ಹಳ್ಳಿಯ ಯುವಕರಿಗೆ ಬುದ್ಧ, ಬಸವ, ಫುಲೆ, ರಾಹು, ಅಂಬೇಡ್ಕರ ಅವರ ವಿಚಾರಧಾರೆ ತಲುಪಿಸಲು ಮುಂದಾಗಬೇಕು” ಎಂದು ಕರೆ ನೀಡಿದರು.

ಜನರ ಧ್ವನಿ ಸಂಘಟನೆ ಬೀದರ್ ಜಿಲ್ಲಾಧ್ಯಕ್ಷ ರಾಜಕುಮಾರ ಸಿಂಧೆ ಮಾತನಾಡಿ, “ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ನೂರಾರು ಸಂಘಟನೆಗಳು ಬರೀ ಸಂಘಟನೆಗಳಾಗಿಯೇ ಉಳಿದಿವೆ. ಆದರೆ, ಇಲ್ಲಿಯವರೆಗೆ ಬಾಬಾಸಾಹೇಬರ ಆಶಯದಂತೆ ರಾಜಕೀಯ ಅಧಿಕಾರ ದಕ್ಕಿಸಿಕೊಳ್ಳುವ ಪ್ರಯತ್ನ ಯಾವುದೇ ಸಂಘಟನೆಗಳು ಮಾಡಿಲಿಲ್ಲ. ಹೀಗಾಗಿ ನಮ್ಮ ಜನರ ಧ್ವನಿ ಸಂಘಟನೆಯು ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ರಾಜಕೀಯ ಶಕ್ತಿಯಾಗಿ ಹೊರಹುಮ್ಮಲಿದೆ” ಎಂದರು.

ತಾಲೂಕು ಪದಾಧಿಕಾರಿಗಳ ನೇಮಕ:

‌ಇದೇ ಸಂದರ್ಭದಲ್ಲಿ ಜನರ ಧ್ವನಿ ಸಂಘಟನೆಯ ಬಸವಕಲ್ಯಾಣ ತಾಲೂಕು ಪದಾಧಿಕಾರಿಗಳ ಸಮಿತಿ ರಚನೆ ಮಾಡಲಾಯಿತು. ಮಾರುತಿ ಕಾಂಬಳೆ (ಅಧ್ಯಕ್ಷ), ರತ್ನದೀಪ ಗಾಯಕವಾಡ (ಉಪಾಧ್ಯಕ್ಷ), ಸೋಮನಾಥ ಮೂಡಬಿಕರ್ (ಪ್ರಧಾನ ಕಾರ್ಯದರ್ಶಿ), ಅವಿನಾಶ ಫುಲಬನೆ (ಕಾರ್ಯದರ್ಶಿ) ಇವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಧ್ಯಕ್ಷ ಅಂಕುಶ ಗೋಖಲೆ, ಜಿಲ್ಲಾಧ್ಯಕ್ಷ ರಾಜಕುಮಾರ ಸಿಂಧೆ‌  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ಧೀರಾ? ಬೀದರ್‌ | ಕನ್ನಡ ಭಾಷೆ ಶ್ರೀಮಂತಿಕೆಯ ಶ್ರೇಯಸ್ಸು ಶರಣರಿಗೆ ಸಲ್ಲುತ್ತದೆ : ಸುರೇಶ ಚನ್ನಶೆಟ್ಟಿ

ಕಾರ್ಯಕ್ರಮದಲ್ಲಿ ಜನರ ಧ್ವನಿ ಸಂಘಟನೆಯ ಹಿರಿಯ ಮುಖಂಡರಾದ ತಿಪ್ಪಣ್ಣ ವಾಲಿ, ಜಮೀಲ್ ಅಹ್ಮದ ಖಾನ್‌, ಜಿಲ್ಲಾ ಉಪಾಧ್ಯಕ್ಷ ಅರವಿಂದ ಮಾಶೆಟ್ಟಿ, ಬೀದರ ತಾಲೂಕಾ ಅಧ್ಯಕ್ಷ ರವಿ ಕೋಟೆ‌ರ್, ಹುಮನಾಬಾದ ತಾಲೂಕಾ ಪ್ರಧಾನ ಕಾರ್ಯದರ್ಶಿ ಪ್ರಭು, ಸಕರೆ ಹಾಗೂ ಸಂಘಟನೆಯ ಪ್ರಮುಖರಾದ ಅಶೋಕ ಪಾಂಡೆ, ಭರತ ಮೋಳಕೆರಾ, ಕುಮಾರ ಗಾಯಕವಾಡ, ಅಕ್ಷಯ ಗಾಯಕವಾಡ, ದೀಪಕ ಶಿಂದೆ, ಕೃಷ್ಣ ವಾಡೇಕರ, ಸುಮೀತ ಕಾಂಬಳೆ, ಅನೀಶ, ಆಶೀಶ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...