ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ.
ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.
ಶುಕ್ರವಾರ ಮೃತ ನಿಜಾಮೋದ್ದೀನ್ ಅವರು ಬೈಕ್ ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಆಳಂದ ಪಟ್ಟಣದ ನಿವಾಸಿ ಸಾಗರ ಅವರು ಬುದ್ದ ನಗರ ರಸ್ತೆಯಲ್ಲಿ ನಿಜಾಮೋದ್ದೀನ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಜಾಮೋದ್ದೀನ್ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳು ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಹಸಿದ ಹೊಟ್ಟೆ ತಣಿಸುವ ʼರಿಶೈನ್ʼ ಯುವಕರು
ಸಿಪಿಐ ಎಸ್.ಎಚ್.ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.