ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 139ನೇ ಜನ್ಮ ದಿನದ ಅಂಗವಾಗಿ ಮೈಸೂರಿನಲ್ಲಿ ಭಾನುವಾರ ರಾಜ್ಯ ರೈತ ಸಂಘದ ಮುಖಂಡರು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ವಿಶ್ವದಲ್ಲಿಯೇ ಮೊದಲು ಜಲ ವಿದ್ಯುತ್ ಯೋಜನೆಯನ್ನು ಆರಂಭಿಸಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಂಬಾಡಿ ಕಟ್ಟೆ, ಕಾವೇರಿ ನದಿಗೆ ಶಿವನಸಮುದ್ರದಲ್ಲಿ ಜಲ ವಿದ್ಯುತ್ ಕಾರ್ಯಗಾರ, ಬಂಡೀಪುರ ರಾಷ್ಟ್ರೀಯ ಉದ್ಯಾನ ಸೇರಿದಂತೆ ಹಲವು ಪ್ರಮುಖ ಯೋಜನೆ ತಂದ ಕೀರ್ತಿ ಸಲ್ಲಬೇಕು ಎಂದು ರೈತ ಸಂಘದ ಮುಖಂಡರು ಇದೆ ಸಮಯದಲ್ಲಿ ಸ್ಮರಿಸಿದರು.
ಈ ವೇಳೆ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಪಿ ಮರಂಕಯ್ಯ, ಅಶ್ವಥ್ ನಾರಾಯಣ ರಾಜೆ ಅರಸ್, ಮನು ಸೋಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ