ಮರು ಮತಾಂತರಕ್ಕೆ ಸಾಮ, ದಾನ, ಭೇದ, ದಂಡ ಬಳಸಬೇಕಿದೆ: ಸಿ ಟಿ ರವಿ

Date:

Advertisements

ಸಾಮ, ದಾನ, ಭೇದ, ದಂಡ ಬಳಸಿ ಮರು ಮತಾಂತರಕ್ಕೆ ಮುಂದಾಗುವ ಅನಿವಾರ್ಯತೆ ಇದೆ. ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದಿರುವುದರಿಂದ ದೇಶ ಮತ್ತು ಹಿಂದೂ ಧರ್ಮ ಉಳಿಸಿಕೊಳ್ಳಲು ಎಲ್ಲ ಸಮುದಾಯದ ಮಠಾಧೀಶರು ಮಹಾ ಪಂಚಾಯತ್ ಕರೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮನ್ನು ನಾವು ಉಳಿಸಿಕೊಳ್ಳಲು ಸ್ವರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಬೇರೆ ಬೇರೆ ಕಾರಣಕ್ಕೆ ಹಿಂದೂ ಧರ್ಮದಿಂದ ಹೊರ ಹೋದವರನ್ನು ಮರಳಿ ಕರೆತರಬೇಕಾದ ಅವಶ್ಯಕತೆ ಇದೆ. ಕಾಂಗ್ರೆಸ್‌ಗೆ ಅಂಬೇಡ್ಕರ್ ಕಂಡರೆ ಮಾತ್ರ ಅಸಹನೆ ಎಂದುಕೊಂಡಿದ್ದೆ. ಭಗತ್ ಸಿಂಗ್, ರಾಜಗುರು, ಸುಖದೇವ್ ಬಗ್ಗೆಯೂ ಅಸಹನೆ ಇದೆ ಎಂಬುದು ಅರ್ಥವಾಗಿದೆ. ನಾವು ಇದೇ ಪಠ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ತಪ್ಪು ಹುಡುಕಲು ಜನರನ್ನು ಕೇಳುತ್ತೇವೆ”’” ಎಂದು ಸಿ ಟಿ ರವಿ ಹೇಳಿದರು.

ಈ ಸುದ್ದಿ ಓದಿದ್ದೀರಾ? 35 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಸಿಎಂ ಸ್ಥಾನ ನೀಡಿಲ್ಲ: ಬೊಮ್ಮಾಯಿ ತಿರುಗೇಟು

Advertisements

‘ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಕುರಿತ ಪಾಠವನ್ನು ಪಠ್ಯದಿಂದ ಕೈಬಿಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ಬರೆದಿದ್ದ ಲೇಖನ ದೇಶಪ್ರೇಮಿಗಳ ಬಗ್ಗೆಯೇ ಹೊರತು ಸೂಲಿಬೆಲೆ ಜೀವನ ಚರಿತ್ರೆ ಅಲ್ಲ. ಹೆಡಗೇವಾರ್ ಅವರ ಪಾಠವನ್ನೂ ಕೈಬಿಡಲಾಗಿದೆ. ಕಾಂಗ್ರೆಸ್ ನಾಯಕರಿಗೆ ದೇಶಭಕ್ತಿ ಎಂದರೆ ಅಸಹನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೈನಾ ಜತೆ ರಾಹುಲ್ ಗಾಂಧಿ ಒಪ್ಪಂದ ದೇಶಭಕ್ತಿಗೆ ವಿರುದ್ಧವಾದುದು ಎಂಬ ಅನುಮಾನ ಬರುತ್ತಿದೆ’ ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆಯಲ್ಲಿ ರೈತರೂ ಉದ್ದಿಮೆದಾರರಾಗುವ ಅವಕಾಶ ಇತ್ತು. ಅದನ್ನು ಹಿಂಪಡೆಯುವ ಮೂಲಕ ರೈತರನ್ನು ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕಿಸುವುದು ಕಾಂಗ್ರೆಸ್ ಉದ್ದೇಶ. ಕಾಂಗ್ರೆಸ್ ಸುಳ್ಳು ಹೇಳಿ ರೈತರ ದಿಕ್ಕು ತಪ್ಪಿಸಿದೆ. ಸದ್ಯದಲ್ಲೇ ಸತ್ಯ ರೈತರಿಗೆ ಅರಿವಾಗಲಿದೆ ಎಂದು ರವಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X