‘ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?’; ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕಿ

Date:

Advertisements

‘ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?’ ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ತಬ್ಬಿಬ್ಬಾಗಿದ್ದಾರೆ. ಉತ್ತರ ಕೊಡಲಾಗದೆ ಪತ್ರಿಕಾಗೋಷ್ಠಿಯಿಂದ ಎದ್ದು ಹೋಗಿದ್ದಾರೆ.

ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಈ ವೇಳೆ, ಪತ್ರಕರ್ತರು ಶಾಸಕಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.

‘ಸುಹಾಸ್ ಶೆಟ್ಟಿ ಮೇಲೆ ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ. ಈ ಬಗ್ಗೆ ಏನಂತೀರಿ?, ಸುಹಾಸ್ ಮೇಲೆ ರೌಡಿಶೀಟ್ ತೆರೆದಿರುವುದೇ ಬಿಜೆಪಿ ಸರಕಾರದ ಅವಧಿಯಲ್ಲಿ ಅಲ್ಲವೇ?’ ಎಂಬ ಪ್ರಶ್ನೆಗಳನ್ನು ಪತ್ರಕರ್ತರು ಕೇಳಿದರು. ಯಾವೊಂದು ಪ್ರಶ್ನೆಗೂ ಉತ್ತರಿಸಲು ಸಾಧ್ಯವಾಗದ ಶಾಸಕಿ, ಸುದ್ದಿಗೋಷ್ಠಿಯನ್ನೇ ಅವಸರದಲ್ಲಿ ಮುಗಿಸಿ ಹೊರಟು ಹೋದರು.

Advertisements

“ಸುಹಾಸ್ ಶೆಟ್ಟಿ ರೌಡಿ ಶೀಟರ್ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಆತ ರೌಡಿ ಅಲ್ಲ. ಆತ ಹಿಂದುತ್ವಕ್ಕಾಗಿ ಹೋರಾಡಿದ ಯುವಕ” ಎಂದು ಹೇಳಿದ ಶಾಸಕಿಗೆ, “ಸುಹಾಸ್ ಶೆಟ್ಟಿ ಹಿಂದು ಯುವಕನೋರ್ವನ ಕೊಲೆ ಪ್ರಕರಣದಲ್ಲಿ 3ನೇ ಆರೋಪಿಯಾಗಿದ್ದ. ಹಿಂದು ಯುವಕನನ್ನು ಕೊಂದಾತ ‘ಹಿಂದೂ ಹೋರಾಟಗಾರ’ ಹೇಗಾಗುತ್ತಾನೆ?” ಎಂದು ಮಾಧ್ಯಮದವರು ಪ್ರಶ್ನಿಸಿದರು.

“ಪ್ರಕರಣ ದಾಖಲಾದವರ ಮೇಲೆ ರೌಡಿಶೀಟ್ ತೆರೆಯುವುದಾದರೆ ಕೆಲವು ರಾಜಕಾರಣಿಗಳ ಮೇಲೂ ಕೇಸ್ ಪ್ರಕರಣಗಳಿವೆ. ಅವರ ಮೇಲೂ ರೌಡಿಶೀಟ್ ತೆರೆಯಬೇಕು” ಎಂದು ಶಾಸಕಿ ಭಾಗೀರಥಿ ಹೇಳಿದಾಗ, “ಆರ್.ಅಶೋಕ್ ಗೃಹ ಸಚಿವರಾಗಿದ್ದ ಬಿಜೆಪಿ ಸರಕಾರದ ಅವಧಿಯಲ್ಲೇ ಸುಹಾಸ್ ಶೆಟ್ಟಿ ಮೇಲೆ ರೌಡಿಶೀಟ್ ತೆರೆದಿರುವುದು ಅಲ್ಲವೇ?” ಎಂದು ಪತ್ರಕರ್ತರು ಕೇಳಿದರು.

ಪ್ರಶ್ನೆಗೆ ಉತ್ತರಿಸದ ಶಾಸಕಿ, “ಈ ಬಗ್ಗೆ ಇನ್ನೊಮ್ಮೆ ಮಾಹಿತಿ ನೀಡುವೆ. ನಾನೀಗ ಕೊಲೆ ಕೃತ್ಯವನ್ನು ಖಂಡಿಸಲು ಸುದ್ದಿಗೋಷ್ಠಿ ಕರೆದಿದ್ದೇನೆ. ಮುಗಿಸುವ. ಆಗಮಿಸಿದ ಎಲ್ಲರಿಗೂ ಅಭಿನಂದನೆಗಳು” ಎಂದು ಗಡಿಬಿಡಿಯಲ್ಲಿ ಸುದ್ದಿಗೋಷ್ಠಿಯನ್ನು ಮುಗಿಸಿ ಎದ್ದು ಹೊರಟರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X