ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

Date:

  • ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ
  • ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ

ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗಂಭೀರ ಆರೋಪ ಮಾಡಿದ್ದಾರೆ.

- Advertisement -

“ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಮೋದಿ ಮತ್ತು ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ” ಎಂದು ತಿಳಿಸಿದ್ದಾರೆ.

“ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೇ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

“ಫೆ. 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಛತ್ರಿ ಕೆಳಗೆ ನಿಂತಿಲ್ಲ ಎಂದು ಹೇಳುವ ಮೂಲಕ ಲೇವಡಿ ಮಾಡಿದ್ದರು. ಬಿಜೆಪಿಯ ದ್ವೇಷಪೂರಿತ ಹೇಳಿಕೆ ಅಲ್ಲಿಗೆ ನಿಲ್ಲಲಿಲ್ಲ. ಮೇ 02 ರಂದು ಬಿಜೆಪಿ ರಾಜಸ್ಥಾನದ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ಮದನ್ ದಿಲಾವರ್, ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದ್ದು, ದೇವರು ಅವರನ್ನು ಯಾವಾಗ ಬೇಕಾದರೂ ಕರೆಸಿಕೊಳ್ಳಬಹುದು ಎಂದು ಖರ್ಗೆ ಅವರ ಸಾವನ್ನು ಬಯಸಿದ್ದರು. ಈಗ ಬಿಜೆಪಿ ನಾಯಕರು ಬಹಿರಂಗವಾಗಿ ಖರ್ಗೆ ಮತ್ತು ಅವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಖರ್ಗೆ ಕುಟುಂಬದ ಕೊಲೆಗೆ ಸಂಚು ರೂಪಿಸಿದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್: ಆಡಿಯೋ ವೈರಲ್

“ಚುನಾವಣೆಯಲ್ಲಿ ಸೋಲುವ ಹತಾಶೆಯಲ್ಲಿ ಬಿಜೆಪಿ ಹಾಗೂ ಅದರ ನಾಯಕರು ಅತ್ಯಂತ ಭಯಾನಕ ಹಂತಕ್ಕೆ ತಲುಪಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ರೂಪಿಸಿರುವ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡದೆ, ತಮ್ಮ 40% ಕಮಿಷನ್ ಭ್ರಷ್ಟಾಚಾರ ಮುಚ್ಚಿಕೊಳ್ಳಲು ನಿತ್ಯ ಭಾವನಾತ್ಮಕ ವಿಚಾರದ ಬಗ್ಗೆ ಮಾತನಾಡಿ ಸಮಾಜ ಒಡೆಯುವ ಪ್ರಯತ್ನಕ್ಕೆ ಮುಂದಾಗಿದೆ. ಈ ಕುತಂತ್ರದಲ್ಲೂ ಯಶಸ್ಸು ಕಾಣದೆ ಕುಸಿಯುತ್ತಿರುವ ಬಿಜೆಪಿ ಈಗ ತಮ್ಮ ಬತ್ತಳಿಕೆಯಿಂದ ಹತ್ಯೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ” ಎಂದು ದೂರಿದ್ದಾರೆ.

“ಬಸವಣ್ಣನ ನಾಡು ಸಾಮರಸ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡ ನಾಡಿನ ಈ ಪರಂಪರೆಯ ಮೇಲೆ ಈಗ ದಾಳಿಯಾಗುತ್ತಿದೆ. ಇದು ಕೇವಲ ಖರ್ಗೆ ಅವರ ಮೇಲೆ ದಾಳಿಯ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇಷ್ಟೆಲ್ಲಾ ಆದರೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಮತ್ತು ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ” ಎಂದು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...