ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

Date:

  • ಪುನೀತ್ ಕೆರೆಹಳ್ಳಿ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಬೇಕಾ?
  • ಬಿಜೆಪಿಗರು ಗದ್ದಲ ಎಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಬೇಡಿ: ಸಭಾಪತಿ ಹೊರಟ್ಟಿ

ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಹಾಗೂ ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದಷ್ಟೇ ಬಿಜೆಪಿ ನಾಯಕರ ಕೆಲಸ ಎಂದು ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದರು.

- Advertisement -

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿ ಇತ್ತೀಚೆಗೆ ನೋಟೀಸ್ ಜಾರಿ ಮಾಡಿದ್ದರು. ಆ ನೊಟೀಸ್‌ನಲ್ಲಿ ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಬಿಆರ್ ಚೋಪ್ರಾ ʼಮಹಾಭಾರತʼಕ್ಕೆ ಜೀವ ನೀಡಿದ್ದ ಮುಸ್ಲಿಂ ಪಂಡಿತ:...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, “ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?” ಎಂದು ಆಕ್ರೋಶ ಹೊರಹಾಕಿದರು.

ಈ ವೇಳೆ ಸರ್ಕಾರದ ಪರವಾಗಿ ಉತ್ತರಿಸಿದ ಸಚಿವ ಕೃಷ್ಣಭೈರೇಗೌಡ, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ.‌ ಸಂಬಂಧಪಟ್ಟ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಆದರೆ ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ‘ಈಗಲೇ ಉತ್ತರ ಬೇಕು‌’ ಎಂದು ಪಟ್ಟುಹಿಡಿದರು. ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ “ಸದನದ ನಿಯನ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಸಭಾಪತಿ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿದರು. “ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು” ಎಂದು ಸೂಚಿಸಿದರು.

ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ‘ಸಚಿವರು ಈಗಲೇ ಉತ್ತರ ನೀಡಬೇಕು’ ಎಂದು ಪಟ್ಟು ಹಿಡಿದರು. ಇದರಿಂದಾಗಿ ಸದನದಲ್ಲಿ ಗದ್ದಲ ಉಂಟಾಗಿತ್ತು.

ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿ ಕಾರಿದ ಸಚಿವ ಕೃಷ್ಣಭೈರೇಗೌಡ, “ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇವರಿಗೆ ಸದನ ನಡೆಯುವುದು ಬೇಕಾಗಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರೂ ಸತ್ಯವೇನು ಎಂಬುದು ಜನರಿಗೆ ಗೊತ್ತು” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಹವಾಮಾನ | ರಾಜ್ಯದ ಹಲವೆಡೆ ಒಣಹವೆ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ...

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...