ಬಿಕೆ ಹರಿಪ್ರಸಾದ್ ಹೇಳಿಕೆ ಡ್ಯಾಮೇಜ್ ಕಂಟ್ರೊ‌ಲ್‌ಗೆ ಸಿಂಗಪುರ ಕಥೆ: ಬಸವರಾಜ ಬೊಮ್ಮಾಯಿ

Date:

Advertisements
  • ‘ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ನಮ್ಮ ಹೈಕಮಾಂಡ್‌ ಆಲೋಚಿಸಿಲ್ಲ’
  • ಸಚಿವರುಗಳ ವಿರುದ್ಧ ಶಾಸಕರೇ ಅಸಮಾಧಾನ ಹೊರ ಹಾಕಿದ್ದಾರೆ

ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಆರಂಭದಿಂದಲೂ ಗೋಚರಿಸುತ್ತಿದೆ. ಬಿ‌ ಕೆ ಹರಿಪ್ರಸಾದ್ ಹೇಳಿಕೆಯಿಂದ ಸರ್ಕಾರಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಿಂಗಪುರ ಕಾರ್ಯತಂತ್ರದ ಕಥೆ ಹೇಳಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸ್ಪಷ್ಟ ಬಹುಮತ ಇದ್ದರೂ ಮುಖ್ಯಮಂತ್ರಿ ಆಯ್ಕೆ ಮಾಡಿರುವ ವಿಧಾನ, ಸಿಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವುದು ಬಹುಮತ ಇದ್ದರೂ ಇಷ್ಟು ಸರ್ಕಸ್ ಮಾಡಿದ್ದು ಎಲ್ಲವೂ ಸರಿ ಇಲ್ಲ ಅಂತ ಆರ್ಥವಾಗುತ್ತದೆ” ಎಂದರು.

“ಸಿದ್ದರಾಮಯ್ಯ ಗ್ಯಾರಂಟಿಗಳಿಗೆ ಹಣ ನೀಡುವ ಸಲುವಾಗಿ ಅಭಿವೃದ್ಧಿಗೆ ಅನುದಾನ ಇಲ್ಲ ಅಂತ ಹೇಳಿದ್ದಾರೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಶಾಸಕರೇ ಬಹಿರಂಗವಾಗಿ ಹೇಳಿದ್ದಾರೆ. ಸಚಿವರುಗಳ ವಿರುದ್ದ ಅಸಮಾಧಾನ ಹೊರ ಹಾಕಿದ್ದಾರೆ. ಆದರೆ, ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ” ಎಂದು ಕಿಡಿಕಾರಿದರು.

Advertisements

“ಸ್ವತಃ ಡಿ.ಕೆ ಶಿವಕುಮಾರ್ ಅವರೇ ಮುಂದೆ ತಾವು ಮಾಡುವ ಕಾರ್ಯತಂತ್ರದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಇದು ಅವರಲ್ಲಿಯೇ ಸಮಾಧಾನ ಇಲ್ಲ ಎನ್ನುವುದು ತೋರಿಸಿದ್ದಾರೆ‌. ಬಿಜೆಪಿಯ ಹೈಕಮಾಂಡ್ ಈ ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಆಲೋಚಿಸಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಭಿನ್ನಾಭಿಪ್ರಾಯ ಸತ್ಯ

“ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇದೆ ಎನ್ನುವುದು ಸತ್ಯ. ಡಿ ಕೆ ಶಿವಕುಮಾರ್ ಸರ್ಕಾರದ ಅಸ್ಥಿರತೆಯ ಬಗ್ಗೆ ಎರಡು ಬಾರಿ ಬಹಿರಂಗವಾಗಿ ಹೇಳಿಕೆ ನೀಡಿದರೂ ಸಿಎಂಗೆ ಮಾಹಿತಿ ಇಲ್ಲ ಎಂದರೆ ಇಬ್ಬರ ನಡುವೆ ಹೊಂದಾಣಿಕೆ ಇಲ್ಲ ಅಂತ ಅರ್ಥ” ಎಂದು ಅಭಿಪ್ರಾಯ ಪಟ್ಟರು.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈನ ಮುನಿ ಹತ್ಯೆಯಿಂದ ಹಿಡಿದು ನಿತ್ಯ ಕೊಲೆ ನಡೆಯುತ್ತಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ನ್ಯಾಯಾಧೀಶರಿಗೆ ಅಂತಾರಾಷ್ಟ್ರೀಯ ಮಟ್ಟದ ಕೊಲೆ ಬೆದರಿಕೆ ಬರುತ್ತಿದೆ. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲದಿದ್ದರೆ ಬೇರೆಯವರಿಗೆ ಹೇಗೆ ರಕ್ಷಣೆ ನೀಡುತ್ತಾರೆ” ಎಂದು ಪ್ರಶ್ನಿಸಿದರು.

“ಗ್ಯಾರಂಟಿ ಜಾರಿ ಮಾಡುವ ನೆಪದಲ್ಲಿ ನಮ್ಮ ಸರ್ಕಾರದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ. ರೈತ ವಿದ್ಯಾನಿಧಿ, ಭೂ
ರೈತಶಕ್ತಿ, ಭೂಸಿರಿ, ರೈತರಿಗೆ ನೀಡಿದ್ದ ಜೀವನ ಜ್ಯೋತಿ ವಿಮೆ ಯೋಜನೆ ಸೆರಿದಂತೆ ಎಲ್ಲ ಯೋಜನೆಗಳನ್ನು ನಿಲ್ಲಿಸಿದ್ದಾರೆ‌. ಕೃಷಿ ಇಲಾಖೆಯಲ್ಲಿ 4,500 ಕೊಟಿ ರೂ.‌ ನೀರಾವರಿ ಇಲಾಖೆಯಲ್ಲಿ 3,500 ಕೊಟಿ ರೂ. ಕಡಿತ ಮಾಡಿದ್ದಾರೆ.‌ ಈ ಸರ್ಕಾರ ಗ್ಯಾರಂಟಿಗಳನ್ನೂ ಸಂಪೂರ್ಣವಾಗಿ ಜಾರಿ ಮಾಡುವುದಿಲ್ಲ. ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದರಿಂದ ಶಾಸಕರು ಅಸಮಾದಾನಗೊಂಡಿದ್ದಾರೆ” ಎಂದರು.

ನೈಸ್ ಅಕ್ರಮದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನೈಸ್ ಅಕ್ರಮದ ಬಗ್ಗೆ ಈಗಾಗಲೇ ಸದನ ಸಮಿತಿ ನೀಡಿರುವ ವರದಿ ಆಧರಿಸಿ ಹೆಚ್ಚುವರಿ ಜಮೀನು ವಶಪಡಿಸಿಕೊಳ್ಳಬೇಕು ಅಂತ ಆಗ್ರಹಿಸಿದ್ದೇವೆ. ಅಲ್ಲದೇ ಹೆಚ್ಚಿಗೆ ಸಂಗ್ರಹಿಸಿರುವ ಟೋಲ್ ವಶಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X