ಎನ್‌ಇಪಿ ರದ್ದು ವಿಚಾರ ಪುನರ್ ಪರಿಶೀಲಿಸಲಿ, ಇಲ್ಲದಿದ್ದರೆ ಹೋರಾಟ: ಬೊಮ್ಮಾಯಿ ಎಚ್ಚರಿಕೆ

Date:

  • ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಪರಾಧ
  • ‘ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ಆಂದೋಲನ ಮಾಡಲಿದೆ’

ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

- Advertisement -

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಇವತ್ತಿನ ಕಾಲಘಟ್ಟಕ್ಕೆ ಅನುಗುಣವಾಗಿ ನೂತನ ಶಿಕ್ಷಣ ನೀತಿಯನ್ನು (ಎನ್‍ಇಪಿ) ರೂಪಿಸಲಾಗಿದೆ. ಎನ್‍ಇಪಿ ಕರಡಿಗೆ ಸಿದ್ದರಾಮಯ್ಯನವರ 2013-18ರ ಅವಧಿಯ ಸರಕಾರ ಒಪ್ಪಿಗೆ ಕೊಟ್ಟಿತ್ತು. ಅದರ ನೇತೃತ್ವವನ್ನು ಕಸ್ತೂರಿರಂಗನ್ ಅವರು ವಹಿಸಿದ್ದರು. ಕರ್ನಾಟಕದ ಶಿಕ್ಷಣ ನೀತಿ ರಚಿಸಿದ್ದ ಕಸ್ತೂರಿರಂಗನ್ ಅವರೇ ಇಡೀ ದೇಶದ ಎನ್‍ಇಪಿ ಮಾಡಿದ್ದಾರೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಇದು ಮಕ್ಕಳ ಭವಿಷ್ಯದ ಬಗ್ಗೆ ಚೆಲ್ಲಾಟ ಎಂದು ಆಕ್ಷೇಪಿಸಿದರು. ಇಡೀ ದೇಶದಲ್ಲಿ ಇರುವ ವ್ಯವಸ್ಥೆ ನಮ್ಮ ರಾಜ್ಯದಲ್ಲಿ ಇಲ್ಲದಿದ್ದರೆ ನಮ್ಮ ಮಕ್ಕಳು ಪೈಪೋಟಿ ಮಾಡುವುದು ಹೇಗೆ? ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬಹಳ ದೊಡ್ಡ ಹಿನ್ನಡೆ ಆಗಲಿದೆ. ಸಿದ್ದರಾಮಯ್ಯನವರು ರಾಜಕೀಯ ಕಾಮಾಲೆ ಕಣ್ಣಿನಿಂದ ನೋಡದೆ ಮಕ್ಕಳ ಉಜ್ವಲ ಭವಿಷ್ಯವನ್ನು ನೋಡಬೇಕು. ಈ ವಿಚಾರವನ್ನು ಪುನರ್ ವಿಮರ್ಶೆ ಮಾಡಬೇಕು. ಇಲ್ಲವಾದರೆ ಪಾಲಕರು, ಶಿಕ್ಷಣ ಸಂಸ್ಥೆಗಳ ಜೊತೆಗೂಡಿ ಬಿಜೆಪಿ ದೊಡ್ಡ ಆಂದೋಲನ ಮಾಡುವುದು ಅನಿವಾರ್ಯವಾಗಲಿದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡಿಯೇ ತೀರುವೆ: ಡಿಕೆ ಶಿವಕುಮಾರ್

“ಸಿದ್ದರಾಮಯ್ಯನವರು ನಮ್ಮ ಅಧಿಕಾರ ಅವಧಿಯ ಕಾಮಗಾರಿಗಳ ತನಿಖೆ ಮಾಡುವುದಾಗಿ ಹೇಳಿ ಮೂರು ತಿಂಗಳಾಗಿದೆ. ಹಲವು ವರದಿಗಳು ಬಂದಿದ್ದು, ಅದರಲ್ಲಿ ಏನೂ ಇಲ್ಲವೆಂದು ಗೊತ್ತಾಗಿ ಪುನರ್ ತನಿಖೆ ಮಾಡುತ್ತಿದ್ದಾರೆ. ರಾಜಕೀಯಪ್ರೇರಿತ ತನಿಖೆಗಳು ನಡೆಯುತ್ತಿವೆ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲಿ. ತನಿಖೆ ಹೆಸರಿನಲ್ಲಿ ತಿಂಗಳುಗಟ್ಟಲೇ ಬಾರ್ಗೇನ್ ಮಾಡಲು ಉಪಯೋಗ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಪ್ರಶ್ನಿಸಿದರು.

“ಬಿಜೆಪಿಗೆ ಮತ ಕೊಡುವವರು ರಾಕ್ಷಸರು ಎಂಬ ಸುರ್ಜೇವಾಲಾರ ಹೇಳಿಕೆ ಅತ್ಯಂತ ಖಂಡನೀಯ. ದೇಶದ ನಾಗರಿಕರಿಗೆ ಮಾಡಿದ ಈ ಅವಮಾನವನ್ನು ಪ್ರತಿಯೊಬ್ಬ ನಾಗರಿಕರೂ ಖಂಡಿಸಬೇಕು. ಕಾಂಗ್ರೆಸ್ ಏನು ಸ್ವಚ್ಛವಾಗಿ ತೊಳೆದ ಮುತ್ತೇ? ಅಲ್ಲಿ ಎಲ್ಲರೂ ಹರಿಶ್ಚಂದ್ರರೇ ಇದ್ದಾರಾ? 75 ವರ್ಷದ ಟ್ರ್ಯಾಕ್ ರೆಕಾರ್ಡ್ ಪರಿಶೀಲಿಸಿದರೆ ಅತ್ಯಂತ ಭ್ರಷ್ಟ, ಜನವಿರೋಧಿ ಸರ್ಕಾರ ನಾವು ನೋಡಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...