ನೋಟರಿ ವಕೀಲರ ನೇಮಕಕ್ಕೆ ಲಂಚ; ಕೇಂದ್ರ ಸರ್ಕಾರದ ಹೆಚ್ಚುವರಿ ಕಾನೂನು ಸಲಹೆಗಾರ ಬಂಧನ

Date:

ನೋಟರಿ ವಕೀಲರನ್ನು ನೇಮಕ ಮಾಡಲು ₹50,000 ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ₹25,000 ಪಡೆಯುತ್ತಿದ್ದ ಆರೋಪದಡಿ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

“ಕೇಂದ್ರ ಸರ್ಕಾರದ ನೋಟರಿ ವಕೀಲರ ನೇಮಕ ಮಾಡುವ ಜವಾಬ್ದಾರಿಯನ್ನು ಕಾನೂನು ವ್ಯವಹಾರ ವಿಭಾಗಕ್ಕೆ ನೀಡಲಾಗಿದೆ. ಬೆಂಗಳೂರಿನ ಕಚೇರಿಯಲ್ಲಿ ಕೆಲಸ ಮಾಡುವ ಮಲಿಕ್, ಅಧಿಕಾರ ದುರುಪಯೋಗಪಡಿಸಿಕೊಂಡು ಲಂಚ ಪಡೆದು ನೋಟರಿ ನೀಡುತ್ತಿದ್ದರು. ಇದಕ್ಕೆ ಸಹಕರಿಸುತ್ತಿದ್ದ ಬೆಂಗಳೂರಿನ ವಕೀಲೆ ಜಿ.ಕೆ ವಾಣಿ ಎಂಬುವವರನ್ನೂ ಬಂಧಿಸಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

“₹25,000 ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಮಲಿಕ್‌ನನ್ನು ಬಂಧಿಸಲಾಗಿದೆ. ಇದೇ ವೇಳೆ ಈತನ ಬಳಿ ₹4.32 ಲಕ್ಷ ನಗದು ಸಿಕ್ಕಿದ್ದು, ಅದೂ ಕೂಡ ಲಂಚದ ಹಣವಾಗಿರುವ ಮಾಹಿತಿ ಇದೆ. ಜೊತೆಗೆ, ಬೆಂಗಳೂರು ಹಾಗೂ ಗಾಜಿಯಾದಾಬ್‌ನಲ್ಲಿರುವ ಆರೋಪಿಗೆ ಸೇರಿದ್ದ ಎರಡು ಸ್ಥಳಗಳ ಮೇಲೂ ದಾಳಿ ಮಾಡಿ, ₹34 ಲಕ್ಷ ಜಪ್ತಿ ಮಾಡಲಾಗಿದೆ. ಆರೋಪಿ ನೀಡಿದ್ದ ಮಾಹಿತಿಯಂತೆ ಬೆಂಗಳೂರಿನಲ್ಲಿ ವಾಣಿ ಅವರನ್ನು ಬಂಧಿಸಲಾಗಿದೆ” ಎಂದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಹುಲಿಗೆಮ್ಮ ಜಾತ್ರೆ; ಅನಿಷ್ಠ ದೇವದಾಸಿ ಪದ್ದತಿ ತಡೆಗಟ್ಟುವಲ್ಲಿ ಯಶಸ್ವಿ

“ಮಹತ್ವದ ಪ್ರಕರಣಗಳಲ್ಲಿ ಎದುರಾಳಿ ವಕೀಲರ ಜೊತೆಗೂ ಮಲಿಕ್ ಒಡನಾಟವಿಟ್ಟುಕೊಂಡು, ಪ್ರಕರಣ ಗೆಲ್ಲಲು ಸಹಕಾರ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ದೇಶದ ಹಲವು ರಾಜ್ಯಗಳ ವಕೀಲರಿಗೆ ಅಕ್ರಮವಾಗಿ ನೋಟರಿ ನೀಡಿರುವ ಸಂಶಯವೂ ಇದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...