ರಾಮನಗರ | ತುಂಡಾದ ಬಸ್‌ ಸ್ಟೇರಿಂಗ್; ಬೈಕ್‌ಗೆ ಢಿಕ್ಕಿ – ಇಬ್ಬರ ದುರ್ಮರಣ

Date:

Advertisements

ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್‌ನ ಸ್ಠೇರಿಂಗ್ ತುಂಡಾಗಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಬೈಕ್‌ವೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ತಿಟ್ಟಮಾರನಹಳ್ಳಿ ಬಳಿ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಕೋಟಮಾರನಹಳ್ಳಿ ಗ್ರಾಮದ ಸಿದ್ದಯ್ಯ (60) ಮತ್ತು ಅವರ ಮಗ ಅರುಣ್ (27) ಮೃತಪಟ್ಟಿದ್ದಾರೆ.

ತಂದೆ-ಮಗ ಇಬ್ಬರು ಬೈಕ್‌ನಲ್ಲಿ ಚನ್ನಪಟ್ಟಣಕ್ಕೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ಗೆ ಎದುರಿನಿಂದ ಬಂದ ಬಸ್‌ ಢಿಕ್ಕಿ ಹೊಡೆದಿದೆ. ಅರುಣ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಯ್ಯ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಆದರೆ, ದಾರಿ ಮಧ್ಯೆಯೇ ಅವರೂ ಮೃತಪಟ್ಟಿದ್ದಾರೆ.

Advertisements

ಬಸ್‌ ಹಳೆಯದಾಗಿದ್ದರಿಂದ ಚಲಿಸುವಾಗಲೇ ಅದರ ಸ್ಟೇರಿಂಗ್ ಕಟ್‌ ಆಗಿದೆ. ಹೀಗಾಗಿ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಢಿಕ್ಕಿಯಾಗಿದೆ. ಕರೆಯ ಏರಿ ಮೇಲೆ ಘಟನೆ ನಡೆದಿದ್ದು, ಕರೆಯ ಬಳಿ ರಸ್ತೆಗೆ ತಡೆಗೋಡೆ ಇದ್ದ ಕಾರಣ, ಬಸ್‌ ಬ್ಯಾರಿಕೇಡ್‌ಗೆ ಗುದ್ದಿ, ನಿಂತಿದೆ. ಒಂದು ವೇಳೆ, ಬ್ಯಾರಿಕೇಡ್ ಇಲ್ಲದಿದ್ದಾರೆ, ಬಸ್‌ ಕೆರೆಗೆ ಉರುಳುವ ಅಪಾಯವಿತ್ತು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X