ಚಿತ್ರದುರ್ಗ | ಶಾಸಕಿ ಕೆ ಪೂರ್ಣಿಮಾ ಕಾಂಗ್ರೆಸ್ ಸೇರುವುದಿಲ್ಲ; ಬಿಎಸ್‌ವೈ ಸ್ಪಷ್ಟನೆ

Date:

Advertisements
  • ಹಿರಿಯೂರಿನ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಶಾಸಕಿ
  • ಕಾಂಗ್ರೆಸ್‌ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ

ಹಿರಿಯೂರಿನ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗಿದ್ದು, ಪಕ್ಷದ ಕೆಲಸದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಿರಿಯೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಇಂದು ಮಧ್ಯಾಹ್ನ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. “ಪೂರ್ಣಿಮಾ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ರಾಜ್ಯದಲ್ಲಿ ಎಲ್ಲರ ನಿರೀಕ್ಷೆ ಮೀರಿ ಬಿಜೆಪಿ ಪರವಾದ ವಾತಾವರಣ ಸೃಷ್ಟಿಯಾಗಿದೆ” ಎಂದು ಹೇಳಿದರು.

“ಮುಂಬರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ಆದರೆ, ಕೆಲವರು ‘ಮುಂದಿನ ಮುಖ್ಯಮಂತ್ರಿ ನಾವೇ’ ಆಗುತ್ತೇವೆಂದು ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Advertisements

ಕಳೆದ ಕಲವು ದಿನಗಳಿಂದ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಶಾಸಕಿ ಪೂರ್ಣಿಮಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಬಿ ಎಸ್‌ ಯಡಿಯೂರಪ್ಪನವರ ಜೊತೆ ಕಾಣಿಸಿಕೊಳ್ಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

Download Eedina App Android / iOS

X