ಬೆಂಗಳೂರು ವಿವಿಗೆ ‘ಐಎಸ್‌ಒ’ ಮಾನ್ಯತೆ

Date:

Advertisements
  • ಎಂಬಿಎ ಸಂಜೆ ಕಾಲೇಜು ಆರಂಭಿಸಲಿದೆ ಬೆಂಗಳೂರು ವಿವಿ
  • ನ್ಯಾಕ್ ಮಾನ್ಯತೆಗೆ ‘ಐಎಸ್‌ಒ’ ಬಹುಮುಖ್ಯ ಪಾತ್ರವಹಿಸುತ್ತದೆ

ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಮೊಟ್ಟಮೊದಲ ಬಾರಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ ಮಾನ್ಯತೆ ಪಡೆದಿದೆ.  

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಯಕರ ಎಸ್‌ಎಂ, “ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಮಾನ್ಯತೆ ಪಡೆಯುವಲ್ಲಿ ವಿಶ್ವವಿದ್ಯಾಲಯಗಳಿಗೆ ಐಎಸ್‌ಒ ಪ್ರಮಾಣೀಕರಣ ಪತ್ರ ಅತಿ ಮುಖ್ಯ ಪಾತ್ರ ವಹಿಸುತ್ತದೆ” ಎಂದು ತಿಳಿಸಿದರು.

“ನ್ಯಾಕ್ ಮಾನ್ಯತೆಗಾಗಿ ಮುಂದಿನ ವಾರಗಳಲ್ಲಿ ನಾಲ್ಕನೆ ಹಂತದ ಅರ್ಜಿ ಸಲ್ಲಿಸಲಾಗುತ್ತದೆ. ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ-9001-2015 ಮಾನ್ಯತೆ ನೀಡಲಾಗಿದೆ” ಎಂದು ಅವರು ವಿವರಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

“ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ ಎಂಬಿಎ ಸಂಜೆ ತರಗತಿಗಗಳನ್ನು ಪುನರಾರಂಭಿಸಲಾಗಿದೆ. 2017ರಲ್ಲಿ ಸಂಜೆ ತರಗತಿಗಳನ್ನು ನಿಲ್ಲಿಸಲಾಗಿತ್ತು. ಲಭ್ಯವಿರುವ 66 ಸೀಟುಗಳಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಅರ್ಹ ಪದವಿ ವಿದ್ಯಾರ್ಥಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು” ಎಂದು ಅವರು ತಿಳಿಸಿದ್ದಾರೆ.

ಐಎಸ್‌ಒ ಮಾನ್ಯತೆಗೆ ಪ್ರಮಾಣೀಕರಣ ಪ್ರಕ್ರಿಯೆಯ ಶಿಕ್ಷಣದ ಗುಣಮಟ್ಟ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಮೂಲಸೌಕರ್ಯ, ದಾಖಲಾತಿ ಮತ್ತು ಪದವಿ ಸೇರಿದಂತೆ ವಿಶ್ವವಿದ್ಯಾನಿಲಯದ ವಿವಿಧ ಅಂಶಗಳ ಸಮಗ್ರ ಲೆಕ್ಕಪರಿಶೋಧನೆಯನ್ನು ಒಳಗೊಂಡಿರುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X