ಬೆಂಗಳೂರು ವಿವಿಗೆ ‘ಐಎಸ್‌ಒ’ ಮಾನ್ಯತೆ

Date:

  • ಎಂಬಿಎ ಸಂಜೆ ಕಾಲೇಜು ಆರಂಭಿಸಲಿದೆ ಬೆಂಗಳೂರು ವಿವಿ
  • ನ್ಯಾಕ್ ಮಾನ್ಯತೆಗೆ ‘ಐಎಸ್‌ಒ’ ಬಹುಮುಖ್ಯ ಪಾತ್ರವಹಿಸುತ್ತದೆ

ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಮೊಟ್ಟಮೊದಲ ಬಾರಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ ಮಾನ್ಯತೆ ಪಡೆದಿದೆ.  

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಯಕರ ಎಸ್‌ಎಂ, “ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಮಾನ್ಯತೆ ಪಡೆಯುವಲ್ಲಿ ವಿಶ್ವವಿದ್ಯಾಲಯಗಳಿಗೆ ಐಎಸ್‌ಒ ಪ್ರಮಾಣೀಕರಣ ಪತ್ರ ಅತಿ ಮುಖ್ಯ ಪಾತ್ರ ವಹಿಸುತ್ತದೆ” ಎಂದು ತಿಳಿಸಿದರು.

“ನ್ಯಾಕ್ ಮಾನ್ಯತೆಗಾಗಿ ಮುಂದಿನ ವಾರಗಳಲ್ಲಿ ನಾಲ್ಕನೆ ಹಂತದ ಅರ್ಜಿ ಸಲ್ಲಿಸಲಾಗುತ್ತದೆ. ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ-9001-2015 ಮಾನ್ಯತೆ ನೀಡಲಾಗಿದೆ” ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?: ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

“ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ ಎಂಬಿಎ ಸಂಜೆ ತರಗತಿಗಗಳನ್ನು ಪುನರಾರಂಭಿಸಲಾಗಿದೆ. 2017ರಲ್ಲಿ ಸಂಜೆ ತರಗತಿಗಳನ್ನು ನಿಲ್ಲಿಸಲಾಗಿತ್ತು. ಲಭ್ಯವಿರುವ 66 ಸೀಟುಗಳಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಅರ್ಹ ಪದವಿ ವಿದ್ಯಾರ್ಥಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು” ಎಂದು ಅವರು ತಿಳಿಸಿದ್ದಾರೆ.

ಐಎಸ್‌ಒ ಮಾನ್ಯತೆಗೆ ಪ್ರಮಾಣೀಕರಣ ಪ್ರಕ್ರಿಯೆಯ ಶಿಕ್ಷಣದ ಗುಣಮಟ್ಟ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಮೂಲಸೌಕರ್ಯ, ದಾಖಲಾತಿ ಮತ್ತು ಪದವಿ ಸೇರಿದಂತೆ ವಿಶ್ವವಿದ್ಯಾನಿಲಯದ ವಿವಿಧ ಅಂಶಗಳ ಸಮಗ್ರ ಲೆಕ್ಕಪರಿಶೋಧನೆಯನ್ನು ಒಳಗೊಂಡಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...

ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ...