ಚಿಕ್ಕಬಳ್ಳಾಪುರ | ಬುಲೆಟ್ ಬೈಕ್ ಕದ್ದು, ಬಾವಿಯೊಳಗೆ ತಳ್ಳಿದ ದು‌ಷ್ಕರ್ಮಿಗಳು; ಶಂಕೆ

Date:

Advertisements

ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ ಮಾಡಿರುವ ದುಷ್ಕರ್ಮಿಗಳು ಬೈಕನ್ನು ತೋಟದೊಳಗಿರುವ ಬಾವಿಯೊಳಗೆ ಹಾಕಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಈಶಾ ಫೌಂಡೇಶನ್ ಮಾರ್ಗದಲ್ಲಿರುವ ಹರಿಹರಪುರ ಗ್ರಾಮದ ರೈತ ಪಾಪಣ್ಣ ಎಂಬುವರಿಗೆ ಸೇರಿದ ತೋಟದಲ್ಲಿರುವ ಬಾವಿಯಲ್ಲಿ ಬುಲೆಟ್ ಬೈಕ್ ಇರುವುದು ಗುರುವಾರ ಪತ್ತೆಯಾಗಿದ್ದು, ನಾನಾ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ರೈತ ಪಾಪಣ್ಣ ಅವರ ಪಕ್ಕದ ಜಮೀನಿನ ರೈತರು ಗುರುವಾರ ಬೆಳಗ್ಗೆ ಬಾವಿಯೊಳಗಿನ ನೀರನ್ನು ತೋಟಕ್ಕೆ ಹಾಯಿಸಲು ಮುಂದಾಗಿದ್ದು, ಈ ವೇಳೆ ಬಾವಿಯೊಳಗೆ ಬೈಕ್ ಇರುವುದು ಪತ್ತೆಯಾಗಿದೆ.

Advertisements

ಆಶ್ಚರ್ಯಗೊಂಡ ರೈತ ಬಾವಿಯಲ್ಲಿರುವ ನೀರನ್ನು ಖಾಲಿ ಮಾಡಿ ಬೈಕ್ ಮೇಲೆತ್ತಲು ಮುಂದಾಗಿದ್ದಾರೆ. ಅದು ಸಾಧ್ಯವಾಗದ ಹಿನ್ನೆಲೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಬೈಕ್ ಮೇಲೆತ್ತಲು ಹರಸಾಹಸಪಟ್ಟಿದ್ದು, ಬೈಕ್ ಮೇಲೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರೈತ ಪಾಪಣ್ಣ, ಈ ಬಾವಿಯಲ್ಲಿನ ನೀರನ್ನ ಕೃಷಿಗೆ ಬಳಸುತ್ತಿರಲಿಲ್ಲ. ಪಕ್ಕದ ಜಮೀನಿನವರ ಬಾವಿ ನೀರನ್ನು ಹಾಯಿಸಿಕೊಳ್ಳುತ್ತೇವೆ ಎಂದು ಕೇಳಿದ್ದರು. ಅವರು ಮೋಟಾರ್‍ ಅಳವಡಿಸುವಾಗ ಬೈಕ್ ಇರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮಾಂತರ ಠಾಣೆ ಎಸ್ಐ, ಹರಿಹರಪುರ ಗ್ರಾಮದ ತೋಟದಲ್ಲಿರುವ ಬಾವಿಯಲ್ಲಿ ಬುಲೆಟ್ ಪತ್ತೆಯಾಗಿದೆ. ಬುಲೆಟ್ ಮುಷ್ಟೂರು ಗ್ರಾಮದ ಕಿರಣ್ ಕುಮಾರ್‍ ರೆಡ್ಡಿ ಎಂಬುವವರಿಗೆ ಸೇರಿದ್ದು, ಅವರ ಮನೆ ಮುಂದೆ ನಿಲ್ಲಿಸಿದ್ದ ಬೈಕನ್ನು ಯಾರೋ ದುಷ್ಕರ್ಮಿಗಳು ಕಳ್ಳತನ ಮಾಡಿ ಬಾವಿಗೆ ಎಸೆದಿದ್ದಾರೆ. ಆರೋಪಿಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X