ದಕ್ಷಿಣ ಕನ್ನಡ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಬಸ್ ಚಾಲಕನಿಗೆ 20 ವರ್ಷ ಜೈಲು

Date:

Advertisements
  • ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ ಬಂಧಿತ ಆರೋಪಿ
  • ಸಂತ್ರಸ್ತ ಬಾಲಕಿಗೆ ₹3 ಲಕ್ಷ ಪರಿಹಾರ ಘೋಷಣೆ ಮಾಡಿದ ನ್ಯಾಯಾಲಯ

ಖಾಸಗಿ ಬಸ್ ಚಾಲಕ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಆತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾವೂರು ಮರಕಡ ನಿವಾಸಿ ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ (30) ಬಂಧಿತ ಆರೋಪಿ.

“ಆರೋಪಿ ಇನ್ಸ್‌ಟಾಗ್ರಾಮ್ ಮೂಲಕ 13 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದು, ಚಾಟ್ ಮಾಡಲು ಪ್ರಾರಂಭಿಸಿದ್ದನು” ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಪ್ರಕರಣದ ವಿವರಗಳನ್ನು ನೀಡಿದರು.

Advertisements

“2022ರ ಜನವರಿ 27ರಂದು ಖಾಸಗಿ ಬಸ್‌ ಚಾಲಕ ಬಾಲಕಿಗೆ ಫೋನ್ ಮಾಡಿ, ತನ್ನೊಂದಿಗೆ ಬರಲು ಆಹ್ವಾನಿಸಿದನು. ಹುಡುಗಿ ನಿರಾಕರಿಸಿದಳು. ಮರುದಿನ ತನ್ನೊಂದಿಗೆ ಬರುವಂತೆ ಆಕೆಯನ್ನು ಮನವೊಲಿಸಿ ಲಾಡ್ಜ್‌ಗೆ ಕರೆದೊಯ್ದ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ಯಾರಿಗೂ ಏನನ್ನೂ ಬಹಿರಂಗಪಡಿಸದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಾನೆ” ಎಂದು ಆರೋಪಿಸಿದರು.

“ಬಾಲಕಿಯ ಪೋಷಕರು ಘಟನೆಯ ಬಗ್ಗೆ ತಿಳಿದು, ಮರುದಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸಿದ ಬಳಿಕ ಮೇ 22ರಂದು ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಇನ್ಸ್‌ಪೆಕ್ಟರ್ ಎಸ್ಎಚ್ ಭಜಂತ್ರಿ ಮತ್ತು ರೇವತಿ ಸೇರಿ ಪ್ರಕರಣದ ತನಿಖೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಆರೋಪಿಗೆ ಪೊಕ್ಸೊ ಕಾಯ್ದೆಯಡಿ 20 ವರ್ಷ ಜೈಲು ಮತ್ತು ₹50,000 ದಂಡ ವಿಧಿಸಲಾಗಿದೆ. ಒಂದು ವೇಳೆ ದಂಡ ಪಾವತಿಸಲು ವಿಫಲವಾದರೆ, ಹೆಚ್ಚುವರಿಯಾಗಿ ನಾಲ್ಕು ತಿಂಗಳ ಆರ್‌ಐಗೆ ಒಳಗಾಗುತ್ತಾರೆ ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಾಲಯವು ಸಂತ್ರಸ್ತೆಗೆ ₹3 ಲಕ್ಷ ಪರಿಹಾರ ಘೋಷಿಸಿದೆ. ಆಕೆಯ ಶಿಕ್ಷಣದ ವೆಚ್ಚಕ್ಕಾಗಿ ತಕ್ಷಣ ₹1 ಲಕ್ಷ ನೀಡುವಂತೆ ಮತ್ತು ಉಳಿದ ₹2 ಲಕ್ಷ ಆಕೆ ವಯಸ್ಕಳಾಗುವವರೆಗೆ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಠೇವಣಿ ಇಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

“ವೈದ್ಯಕೀಯ ಪುರಾವೆಗಳ ಜೊತೆಗೆ, ಬಾಲಕಿ ಮತ್ತು ಲಾಡ್ಜ್ ಮಾಲೀಕ ಸೇರಿದಂತೆ 9 ಸಾಕ್ಷಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ” ಎಂದು ವೆಂಕಟರಮಣ ಸ್ವಾಮಿ ಹೇಳಿದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X