ಕಲಬುರಗಿ | ತಂಗುದಾಣ ಇದ್ದರೂ ನಿಲ್ಲಿಸದ ಬಸ್‌ಗಳು

Date:

Advertisements

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್, ನವದಗಿ ಗ್ರಾಮಗಳು ಆಡಳಿತದ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಗ್ರಾಮಗಳು ಹೆದ್ದಾರಿ ಸಮೀಪವೇ ಇದ್ದು, ಬಸ್‌ ತಂಗುದಾಣಗಳಿದ್ದರೂ ಸರ್ಕಾರಿ ಸಾರಿಗೆ ಬಸ್‌ಗಳು ನಿಲುಗಡೆ ನೀಡದೆ, ಹೋಗುತ್ತಿವೆ. ಹೀಗಾಗಿ, ನಿತ್ಯ ಗ್ರಾಮಗಳ ಜನರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಸ್‌ಗಳ ನಿಲುಗಡೆ ಇಲ್ಲದ ಕಾರಣ, ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಗ್ರಾಮಸ್ಥರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಿ ಬರುವುದೇ ಪ್ರಯಾಸವಾಗುತ್ತಿದೆ. ಹೀಗಾಗಿ, ಅವರ ವಿದ್ಯಾಭ್ಯಾಸಕ್ಕೂ ತೊಂದರೆ ಉಂಟಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ಬದಿಯಲ್ಲಿ ತಾಸು ಗಟ್ಟಲೆ ಬಸ್‌ಗಾಗಿ ಕಾಯುವ ಪರಿಸ್ಥಿತಿ ಇದೆ. ಯಾವುದೋ ಕೆಲವು ಬಸ್‌ಗಳಷ್ಟೇ ನಿಲ್ಲಿಸುತ್ತವೆ. ಕೆಲವು ಬಸ್‌ಗಳು ನಿಲ್ಲಿಸದೂ, ಅವುಗಳಲ್ಲಿ ಹತ್ತಲು ಜಾಗವಿಲ್ಲದಷ್ಟು ಪ್ರಯಾಣಿಕರು ತುಂಬಿರುತ್ತಾರೆ ಎಂದು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ.

Advertisements

ಬೀದರ್, ಹುಮನಾಬಾದ್‌ಗೆ ಹೋಗುವ ಸಾಕಷ್ಟು ಬಸ್‌ಗಳು ಗ್ರಾಮಗಳ ಮೂಲಕ ಹಾದು ಹೋಗುತ್ತವೆ. ಆದರೆ, ಅವು ಗ್ರಾಮಗಳಲ್ಲಿ ನಿಲ್ಲಿಸುವುದಿಲ್ಲ. ನಿಲ್ಲಿಸುವಂತೆ ಕೇಳಿದರೆ, ಸ್ಟಾಪ್‌ ಇಲ್ಲವೆಂದು ನಿರ್ವಾಹಕ, ಚಾಲಕರು ಹೇಳುತ್ತಾರೆ. ಪಕ್ಕದ ಹಳಿಖೇಡ್ (ಕೆ) ಗ್ರಾಮದಲ್ಲಿ ಇಳಿದು, 2 ಕಿ.ಮೀ ನಡೆದು ತಮ್ಮ ಹಳ್ಳಿಗಳಿಗೆ ಬರಬೇಕು ಎಂದು ಕಿಣ್ಣಿ ಸಡಕ್ ಗ್ರಾಮಸ್ಥರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಿಕ್ಕಬಳ್ಳಾಪುರ | ಸ್ಮಶಾನ ಕಾರ್ಮಿಕರಿಂದ ಅಣುಕು ಶವಯಾತ್ರೆ – ಪ್ರತಿಭಟನೆ

“ಕೆಲವು ಸಿಟಿ ಬಸ್‌ಗಳು ಗ್ರಾಮದಲ್ಲಿ ನಿಲ್ಲಿಸುತ್ತವೆ. ಅದೂ ಸಂಜೆ ವೇಳೆ, ಒಂದೇ ಬಸ್‌ ಇರುವುದು. ಅದೂ ಸರಿಯಾಗಿ ಬರುವುದಿಲ್ಲ. ಆ ಬಸ್‌ ಬರದಿದ್ದರೆ, ಖಾಸಗಿ ವಾಹನಗಳ ಮೂಲಕ ಗ್ರಾಮಕ್ಕೆ ಬರಬೇಕು” ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X