ಬಂಟ್ವಾಳ | ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

Date:

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ಇತ್ತೀಚೆಗೆ ಕೊಲೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ದ್ವೇಷ ಭಾಷಣ ಮಾಡಿದ್ದರು.

ಇದನ್ನು ಓದಿದ್ದೀರಾ? ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಕೋಮು ದ್ವೇಷ ಬಿತ್ತುವ, ಸಮಾಜದ ಸ್ವಾಸ್ಥ್ಯ ಕದಡುವ ಭಾಷಣ ಮಾಡಿದ ಪ್ರಭಾಕರ್ ಭಟ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಅಪಮಾನ ಮಾಡಿದ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣ ಕೋರ್ಟ್‌ “ಮುಂದೆ ಇಂತಹ ಭಾಷಣ ಮಾಡಿದರೆ ಜಾಮೀನು ರದ್ದಾಗಲಿದೆ” ಎಂದು ಹೇಳಿತ್ತು. ಆದರೆ ಸದ್ಯ ಆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮಾರಕಾಸ್ತ್ರದಿಂದ ವ್ಯಕ್ತಿಯ ಕೊಲೆ

ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೋರ್ವನನ್ನು ಕೊಡಲಿಯಿಂದ ಕೊಚ್ಚಿ...

ವಿಜಯಪುರ | ಪುಂಡರ ತಾಣವಾದ ಡಿ.ದೇವರಾಜ ಅರಸು ಭವನ; ಕ್ರಮ ಕೈಗೊಳ್ಳುವರೇ ಅಧಿಕಾರಿಗಳು?

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ,...

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411...

Download Eedina App Android / iOS

X