ಉಡುಪಿ | ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

Date:

Advertisements

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಇವರು ಆಧಾರರಹಿತವಾಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಯನ್ನು ಭಂಗ ತರುವಂತೆ ಮಾತನಾಡಿರುವುದಾಗಿ ದೂರಲಾಗಿದೆ.

ಈ ಹೇಳಿಕೆ ಸಾರ್ವಜನಿಕರಿಗೆ ಸುಳ್ಳು ಮಾಹಿತಿ ನೀಡಿ ಗಲಭೆ-ಗೊಂದಲ ಉಂಟು ಮಾಡುವಂತಿದೆ. ರಿಯಾಝ್ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X