ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.

ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ ದಲಿತ ಸಮುದಾಯದ ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಪ್ರಬಲ ಜಾತಿ ಮುಖಂಡರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮಹದೇವ್ ಎಂಬವರು ಗ್ರಾಮದೊಳಗೆ ಪಂಚಾಯತಿ ನಡೆಸಿ ಬಹಿಷ್ಕಾರ ಹಾಕಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ರಂಗನಾಥಪುರ ಗ್ರಾಮದ ಪ್ರಮೋದ್ ಮತ್ತು ಸುರೇಶ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ, ಪ್ರಮೋದ್ ಮತ್ತು ಆತನ ಸಹಚರರು ಸುರೇಶ್ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ಅವರ ಮನೆಯ ಬೆಲೆ ಬಾಳುವ ವಸ್ತುಗಳನ್ನು ಧ್ವಂಸ ಮಾಡಿದ್ದರು. ಗಲಾಟೆ ವಿಚಾರವಾಗಿ ಗ್ರಾಮದೊಳಗೆ ಮುಖಂಡರು ಪಂಚಾಯತಿ ನಡೆಸಿ, ಇಬ್ಬರಿಗೂ ದಂಡ ವಿಧಿಸಿದ್ದರು. ಪ್ರಮೋದ್‌ಗೆ 25,000 ರೂ. ಮತ್ತು ಸುರೇಶ್​ಗೆ 15,000 ರೂ. ದಂಡ ವಿಧಿಸಲಾಗಿತ್ತು.

Advertisements

ಆದರೆ, ತಮ್ಮ ಮನೆಗೆ ಮೇಲೆ ದಾಳಿ ಮಾಡಿ, ಹಲವಾರು ವಸ್ತುಗಳನ್ನು ಧ್ವಂಸ ಮಾಡಿದ್ದ ಪ್ರಮೋದ್‌ಗೆ ಹೆಚ್ಚಿನ ದಂಡ ವಿಧಿಸದೆ, ತಮಗೂ ದಂಡ ವಿಧಿಸಿದ್ದ ಗ್ರಾಮದ ಮುಖಂಡರ ನಡೆಯನ್ನು ಸುರೇಶ್‌ ಖಂಡಿಸಿದ್ದರು. ತಮಗೆ ಅನ್ಯಾಯವಾಗಿದೆ. ನಾವು ದಂಡ ಪಾವತಿಸುವುದಿಲ್ಲ ಎಂದು ಸುರೇಶ್‌ ಹೇಳಿದ್ದರು.

ಈ ವರದಿ ಓದಿದ್ದೀರಾ?: ಕೆಪಿಎಸ್‌ಸಿ ಕರ್ಮಕಾಂಡ | ಮರುಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಎಡವಟ್ಟು: ಬೇಜವಾಬ್ದಾರಿ ಅಧಿಕಾರಿಗಳ ತಲೆದಂಡವೇ ಸೂಕ್ತ ಕ್ರಮ?

ದಲಿತ ಸಮುದಾಯದ ಸುರೇಶ್ ಅವರು ನ್ಯಾಯ ಕೇಳಿದ್ದನ್ನು ಗ್ರಾಮದ ಪ್ರಬಲ ಜಾತಿಯ ಮುಖಂಡರಿಗೆ ಸಹಿಸಲಾಗಿಲ್ಲ. ಸುರೇಶ್‌ ಅವರ ವಾದದಿಂದ ಮುಜುಗರಕ್ಕೀಡಾಗಿ, ಕೆರಳಿದ ಮುಖಂಡರು, ಸುರೇಶ್‌ ತಪ್ಪು ಕಾಣಿಕೆ ಕಟ್ಟುವರೆಗೆ ಅವರ ಕುಟುಂಬವನ್ನು ಯಾರೂ ಒಳಗೊಳ್ಳುವಂತಿಲ್ಲ ಎಂದು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ತಮಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ದರ ಬಗ್ಗೆ ಸುರೇಶ್ ಮೈಸೂರು ಜಿಲ್ಲಾಧಿಕಾರಿ, ಪೊಲೀಸರು, ತಹಶೀಲ್ದಾರ್​ಗೆ ದೂರು ನೀಡಿದ್ದಾರೆ. ಆದರೂ, ಅವರಿಗೆ ಈವರೆಗೆ ನ್ಯಾಯ ದೊರೆತಿಲ್ಲ. ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X