ಜಾತಿ ಗಣತಿ | ತುಮಕೂರು ರಾಜ್ಯಕ್ಕೆ ಎರಡನೇ ಸ್ಥಾನ : ಡಾ. ಜಿ. ಪರಮೇಶ್ವರ

Date:

ರಾಜ್ಯ ಸರ್ಕಾರದ ಆದೇಶದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ ಪ್ರಾರಂಭವಾಗಿದ್ದು  ತುಮಕೂರು ಜಿಲ್ಲೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡುವಲ್ಲಿ  ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ ಹೇಳಿದರು.

- Advertisement -

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಒಟ್ಟು 6544 ಬ್ಲಾಕ್ ಗಳಲ್ಲಿ, ಒಟ್ಟು 7,55,483 ಮನೆಗಳನ್ನು ಒಳಗೊಂಡಂತೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಬೆರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರಿನಲ್ಲಿ ವೇಗವಾಗಿ ನಡೆಯುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಸಾಮಾಜಿಕ , ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ತಹಶೀಲ್ದಾರರು ಹಾಗೂ ಇಓಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದ್ದು, ಇವರನ್ನು ಬೇರೆ ಯಾವುದೇ ಇತರೆ ಕೆಲಸಗಳನ್ನು ವಹಿಸಿರುವುದಿಲ್ಲ. ಅಕ್ಟೋಬರ್ 7 ರೊಳಗೆ ತುಮಕೂರು ಜಿಲ್ಲೆಯ 755483 ಮನೆಗಳ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11,86,000 ಮನೆಗಳ ಪೈಕಿ 2,51,000 ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ ಮೊದಲ ಸ್ಥಾನದಲ್ಲಿದೆ. ರಾಜ್ಯದಲ್ಲಿ 12285ಬ್ಲಾಕ್ ಗಳಲ್ಲಿ ಸಮೀಕ್ಷೆ ನಡೆಯಲ್ಲಿದ್ದು, ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಗಣತಿದಾರರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದರು.

ತುಮಕೂರು ಜಿಲ್ಲೆಯಲ್ಲಿ ಪ್ರಸ್ತುತ ಚಿಕ್ಕನಾಯಕನಹಳ್ಳಿ 13125, ಗುಬ್ಬಿ 2055, ಕೊರಟಗೆರೆ 10000, ಕುಣಿಗಲ್ 14000, ಮಧುಗಿರಿ 13000, ಶಿರಾ 15000, ತಿಪಟೂರು17000, ಪಾವಗಡ 10000, ತುರುವೇಕೆರೆ 10000, ತುಮಕೂರು 26000 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 1,59, 555 ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ ಎಂದರು.

ತುಮಕೂರು  ಜಿಲ್ಲೆಯಲ್ಲಿ 6537 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಒಂದೇ ದಿನದಲ್ಲಿ 73910 ಮನೆಗಳಿಗೆ ಗಣತಿದಾರರು ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.ಸಮೀಕ್ಷೆ ಪ್ರಾರಂಭದಲ್ಲಿ ತಾಂತ್ರಿಕ ತೊಂದರೆಗಳ ಹಿನ್ನೆಲೆಯಲ್ಲಿ ಸಮೀಕ್ಷಾ ಆಪ್ ನಲ್ಲಿ ಪ್ರಸ್ತುತ 3.6 ಆವೃತ್ತಿ ಅಪ್ಡೇಟ್ ಮಾಡಲಾಗಿದ್ದು, ಪ್ರಸ್ತುತ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲದೆ ಸಮೀಕ್ಷೆ ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...