ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

Date:

Advertisements

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಎಫ್‌ಐಟಿಯು) ನೈತಿಕ ಬೆಂಬಲ ನೀಡಲಿದೆ ಎಂದು ಸಂಘಟನೆಯ ಬೆಂಗಳೂರು ನಗರದ ಉಸ್ತುವಾರಿ ಅಬ್ದುಲ್ ರಹಿಮಾನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಸುಪ್ರಿಂ ಕೋರ್ಟಿನ ತೀರ್ಮಾನವನ್ನು ರಾಜ್ಯ ಸರ್ಕಾರ ಪಾಲಿಸಬೇಕಾದದ್ದು ನ್ಯಾಯವಾಗಿದೆ.‌ ಆದರೆ ರಾಜ್ಯದಲ್ಲಿ ಮಳೆಯ ಅಭಾವದಿಂದ ನೀರಿನ ಸಮಸ್ಯೆ ಬಹಳಷ್ಟು ತಲೆದೋರಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಸುಪ್ರಿಂ ಕೋರ್ಟಿನ ಆದೇಶದಂತೆ ನೀರು ಹರಿಸಿದರೆ ರಾಜ್ಯದಲ್ಲಿ ಇನ್ನಷ್ಟು ಬರಗಾಲ ಸಂಭವಿಸುವುದು ನಿಶ್ಚಿತ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಲವಾರು ಜಿಲ್ಲೆಗಳನ್ನು ಈಗಾಗಲೇ ತೀವ್ರ ಬರಗಾಲ ಪೀಡಿತ ಜಿಲ್ಲೆಗಳು ಎಂದು ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಿದರೆ ಕರ್ನಾಟಕದ ಸ್ಥಿತಿ ‘ಗಾಯದ ಮೇಲೆ ಬರೆ’ ಎಂಬಂತೆ ಆಗಬಹುದು. ಆದ್ದರಿಂದ ಸುಪ್ರಿಂ ಕೋರ್ಟ್‌ಗೆ ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಇನ್ನಷ್ಟು ಮನವರಿಕೆ ಮಾಡಿಸುವ ಪ್ರಯತ್ನ ಮಾಡಬೇಕಾಗಿದೆ”‌ ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಗದಗ | ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಕರವೇ ಆಗ್ರಹ

“ಮೇಲ್ನೋಟಕ್ಕೆ ರಾಜ್ಯ ಸರಕಾರವು ಸರಿಯಾದ ರೀತಿಯಲ್ಲಿ, ಬೇಕಾದ ಕ್ರಮದಲ್ಲಿ ಸುಪ್ರಿಂ ಕೋರ್ಟಿಗೆ ಮನವರಿಕೆ ಮಾಡುವುದರಲ್ಲಿ ವಿಫಲವಾಗಿದೆ ಎಂದು ಕಾಣುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಬಂದ್ ಹಿಂಸಾತ್ಮಕ ರೀತಿಯಲ್ಲಿಯೊ, ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿಯೋ ನಡೆಯಬಾರದು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X